Webdunia - Bharat's app for daily news and videos

Install App

ಹುಡುಗಿ ಚುಡಾಯಿಸಿದಕ್ಕೆ ಗಲಾಟೆ: ಲಾಠಿ ಚಾರ್ಜ್

Webdunia
ಮಂಗಳವಾರ, 17 ಜುಲೈ 2018 (14:54 IST)
ಹುಡುಗಿಯನ್ನ ಚುಡಾಯಿಸಿದ ಹಿನ್ನಲೆಯಲ್ಲಿ ಕೋಲಾರದ ರಹಮತ್ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ ನಂತರ ತಿಳಿಯಾದ ಘಟನೆ ನಡೆದಿದೆ. ನಡುವೆ ಗುಂಪನ್ನು ಚದುರಿಸಲು ಪೊಲೀಸರು ಎರಡು ಬಾರಿ ಲಾಠಿ ಚಾರ್ಜ್ ನಡೆಸಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ ಘಟನೆಯು ನಡೆಯಿತು. ಇದೀಗ ರಹಮತ್ ನಗರ ಬೂದಿಮುಚ್ಚಿದ ಕೆಂಡದಂತಿದೆ.

ರಾತ್ರಿ 10 ಗಂಟೆ ಸಮಯದಲ್ಲಿ ರಹಮತ್ ನಗರದ ಸನ್ನಿ ಸ್ಟುಡಿಯೋದಲ್ಲಿ ಅನ್ಯಕೋಮಿನ ಯುವತಿಯೊಬ್ಬಳು ಫೋಟೋ ತೆಗೆದುಕೊಳ್ಳಲು ಹೋಗಿದ್ದಾಳೆ. ಆಗ ಸ್ಟುಡಿಯೋದಲ್ಲಿದ್ದ ಪುಂಡ ಯುವಕರಿಬ್ಬರು ಯುವತಿಯನ್ನ ಚುಡಾಯಿಸಿದ್ದಾರೆ. ಆಗ ಯುವತಿ ಯುವಕರು ಚುಡಾಯಿಸಿದ್ದನ್ನ ಮನೆಯವ್ರಿಗೆ ತಿಳಿಸಿದ್ದಾಳೆ. ಇದ್ರಿಂದ ರೊಚ್ಚಿಗೆದ್ದ ಯುವತಿಯ ಕಡೆಯವರು ಸ್ಟುಡಿಯೋ ಬಳಿ ಜಮಾಯಿಸಿ ಚುಡಾಯಿಸಿದ್ದ ಯುವಕರನ್ನು ಥಳಿಸಿ, ಕೂಡಿ ಹಾಕಿದ್ದಾರೆ. ಸ್ಟುಡಿಯೋಗೆ ಹಾನಿ ಮಾಡಲು ಮುಂದಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಗಲ್ ಪೇಟೆ ಪೊಲೀಸರು ಗುಂಪನ್ನು ಚದುರಿಸಲು ಪ್ರಯತ್ನಿಸಿದ್ದಾರೆ. ಗುಂಪು ಚದುರದೆ ಇದ್ದಾಗ ಲಾಠಿ ಚಾರ್ಜ್ ಮಾಡಿ ಯುವಕರನ್ನ ವಶಕ್ಕೆ ಪಡೆದಿದ್ದಾರೆ.

ಸುದ್ದಿ ತಿಳಿದು ಹೆಚ್ಚಿ ಸಂಖ್ಯೆಯಲ್ಲಿ ಜಮಾಯಿಸಿದ ಅನ್ಯಕೋಮಿನ  ಯುವಕರ ಗುಂಪು ಪೊಲೀಸರ ವಿರುದ್ಧ ಧಿಕ್ಕಾರಗಳನ್ನ ಕೂಗಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೇಳೆ ಯುವಕರ ಗುಂಪಿನಲ್ಲಿದ್ದ ಅಪರಿಚಿತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದ್ರಿಂದ ಪೊಲೀಸರು ಮತ್ತೆ ಲಾಠಿ ಚಾರ್ಜ್ ಮಾಡಿ ಗುಂಪನ್ನ ಚದುರಿಸಲು ಪ್ರಯತ್ನಿಸಿದ್ದಾರೆ. ಆಗ ಇಡೀ ರಹಮತ್ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ರಹಮತ್ ನಗರದಲ್ಲಿ ಪರಿಸ್ಥಿತಿಯನ್ನ ಹತೋಟಿಗೆ ತರಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments