Select Your Language

Notifications

webdunia
webdunia
webdunia
webdunia

ನೀರಲ್ಲಿ ತೇಲಿ ಹೋದ ಹುಡುಗಿ : ಶವವಾಗಿ ಸಿಗೋದಾ

ನೀರಲ್ಲಿ ತೇಲಿ ಹೋದ ಹುಡುಗಿ : ಶವವಾಗಿ ಸಿಗೋದಾ
ಧಾರವಾಡ , ಶನಿವಾರ, 8 ಆಗಸ್ಟ್ 2020 (16:52 IST)
ಆಕೆಗೆ ಇನ್ನೂ 8 ವರ್ಷಗಳು. ಬದುಕಿ ಬಾಳಬೇಕಿದ್ದ ಬಾಲಕಿ. ಆದರೆ ಆಗಬಾರದ್ದು ಆದ ಪರಿಣಾಮ ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾಳೆ.


ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ  ಹಿರೇಕೆರೆ ನೀರಿನ ಸೆಳವಿನಲ್ಲಿ ತೇಲಿ ಹೋಗಿದ್ದ 8 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

ಶ್ರೀದೇವಿ ಹನುಮಂತಪ್ಪ ಗಾಣಿಗೇರ ಮೃತದೇಹ ಇದೀಗ ತೇಲಿ ಹೋದ ಸ್ಥಳದ ಸುಮಾರು ಒಂದೂವರೆ ಕಿ.ಮೀ.ಅಂತರದಲ್ಲಿ ಪತ್ತೆಯಾಗಿದೆ.

ಅಗಸ್ಟ್ 6 ರಂದು ಈ ಬಾಲಕಿ ನೀರಿನ ಸೆಳವಿಗೆ ಸಿಕ್ಕು ತೇಲಿ ಹೋಗಿದ್ದಳು. ಅಂದಿನಿಂದ ನಿರಂತರವಾಗಿ ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಿದ್ದರು. ಬಾಲಕಿಯ ದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

ಬಾಲಕಿಯ ಕುಟುಂಬಕ್ಕೆ ಶೀಘ್ರವೇ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಬೃಹತ್ ಧ್ವಜಸ್ತಂಭದಲ್ಲಿ ಕೇಂದ್ರ ಸಚಿವರಿಂದ ಧ್ವಜಾರೋಹಣ