Publish Date: Mon, 20 Jun 2016 (19:36 IST)
Updated Date: Mon, 20 Jun 2016 (19:38 IST)
ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಜಾರಿಗೆ ತರಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರ್ವಜನಿಕರನ್ನು ಶೋಷಿಸುತ್ತಿರುವ ಮೌಢ್ಯಾಚಾರಣೆಗಳನ್ನು ನಿಷೇಧಿಸಲು ನಮ್ಮ ಸರಕಾರ ಬದ್ಧವಾಗಿದೆ. ಇದಕ್ಕೆ ಪೂರಕವಾದ ಅಂಶಗಳನ್ನು ಮಸೂದೆಯಲ್ಲಿ ಸೇರಿಸಲಾಗುವುದು ಎಂದು ತಿಳಿಸಿದರು.
ಚಾಮರಾಜನಗರಕ್ಕೆ ಭೇಟಿ ನೀಡಿದರೆ ನನ್ನ ಅಧಿಕಾರ ಹೋಗುತ್ತದೆ ಎಂದು ಹಲವು ಜನರು ಹೇಳಿದ್ದರು. ಆದರೆ, ನಾನು ಅಧಿಕಾರ ಕಳೆದುಕೊಂಡಿಲ್ಲ ಎಂದು ಹೇಳಿದರು. ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬಂದು ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದರು.
ಇದೇ ವೇಳೆ ತಮ್ಮ ಕಾರಿನ ಮೇಲೆ ಕಾಗೆ ಕುಳಿತಿದ್ದಕ್ಕೆ ನಾನು ಕಾರನ್ನು ಬದಲಾಯಿಸಿಲ್ಲ. ಆ ಕಾರನ್ನು ನಾನು ಕಳೆದ ಮೂರು ವರ್ಷಗಳಿಂದ ಬಳಸುತ್ತಿದ್ದೇನೆ. ಕಳೆದ ಎರಡು ತಿಂಗಳ ಹಿಂದೆ ಹೊಸ ಕಾರ್ ಬುಕ್ ಮಾಡಿರುವ ಹಿನ್ನೆಲೆಯಲ್ಲಿ ಕಾರು ಬದಲಾಯಿಸಿರುವುದಾಗಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ