Webdunia - Bharat's app for daily news and videos

Install App

ಲಾಕ್ ಡೌನ್ ಇದ್ರೂ ಈ ಕೆಲಸಕ್ಕೆ ಗ್ರೀನ್ ಸಿಗ್ನಲ್ ನೀಡಿದ ಸರಕಾರ

Webdunia
ಶುಕ್ರವಾರ, 17 ಏಪ್ರಿಲ್ 2020 (19:55 IST)
ಕೊರೊನಾ ಎರಡನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವಾಗಲೇ ಸರಕಾರ ನಿರ್ಮಾಣ ಕಾಮಗಾರಿ ನಡೆಸೋರಿಗೆ, ಕಾರ್ಮಿಕರಿಗೆ ಶುಭ ಸುದ್ದಿ ನೀಡಿದೆ.

ಎರಡನೇ ಹಂತದ ಲಾಕ್‍ಡೌನ್ ಅವಧಿ ಮೇ.3 ರ ವರೆಗೂ ವಿಸ್ತರಣೆ ಆಗಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಬಾರದು. ಕಾರ್ಮಿಕರಿಗೂ ಕನಿಷ್ಠ ಜೀವನ ನಿರ್ವಹಣೆ ಮಾಡಲು ಉದ್ಯೋಗ ಸಿಗಬೇಕು ಎನ್ನುವ ಆಶಯದೊಂದಿಗೆ ಕಂಟೈನ್‍ಮೆಂಟ್ ಪ್ರದೇಶ ಹೊರತುಪಡಿಸಿ ಧಾರವಾಡ ಜಿಲ್ಲೆಯಲ್ಲಿ ಕಟ್ಟಡ, ರಸ್ತೆ, ಸೇತುವೆ ಮೊದಲಾದ ನಿರ್ಮಾಣ ಕಾಮಗಾರಿಗಳನ್ನು ಪ್ರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು.

ಗುತ್ತಿಗೆದಾರರು ಕಾರ್ಮಿಕರಿಗೆ ವಸತಿ, ಕ್ಯಾಂಪ್‍ಗಳನ್ನು ನಿರ್ಮಿಸಿ ಅಲ್ಲಿಯೇ ಊಟ, ಉಪಾಹಾರ ಸೌಕರ್ಯಗಳನ್ನು ಒದಗಿಸಬೇಕು.  ಪ್ರತಿದಿನ ಕಾರ್ಮಿಕರು ತಮ್ಮ ಸ್ಥಳಗಳಿಗೆ ಸಂಚರಿಸಲು ಅವಕಾಶ ಇರುವುದಿಲ್ಲ ಎಂದು ಬೃಹತ್ ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

 ನಿರ್ಮಾಣ ಕಾಮಗಾರಿಗಳನ್ನು ಅನುಮತಿ ಪಡೆದು ಕೈಗೊಳ್ಳಬಹುದು. ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿಯೇ ವಸತಿ ಕಲ್ಪಿಸಬೇಕು. ಸಾಮಾಜಿಕ ಅಂತರ, ಶುಚಿತ್ವ ಕಾಪಾಡಬೇಕು. ಪ್ಲಂಬರ್‍ಗಳು, ಮೋಟಾರ್ ಮೆಕ್ಯಾನಿಕ್‍ಗಳು ಹಾಗೂ ಪೂರಕ ಚಟುವಟಿಕೆಗಳ ಕಾರ್ಮಿಕರಿಗೂ ಈ ವಿನಾಯಿತಿ ಅನ್ವಯಿಸುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments