Publish Date: Wed, 17 Aug 2022 (07:20 IST)
Updated Date: Wed, 17 Aug 2022 (00:23 IST)
ಬೆಂಗಳೂರು : ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್ನ ನೂತನ ಐವರು ಹೆಚ್ಚುವರಿ ನ್ಯಾಯಾಧೀಶರಿಗೆ ಮಂಗಳವಾರ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಬೋಧಿಸಿದರು.
ನ್ಯಾ. ಅನಿಲ್ ಭೀಮಸೇನ ಕಟ್ಟಿ, ನ್ಯಾ. ಗುರುಸಿದ್ದಯ್ಯ ಬಸವರಾಜ, ನ್ಯಾ. ಚಂದ್ರಶೇಖರ ಮೃತ್ಯುಂಜಯ ಜೋಶಿ, ನ್ಯಾ. ಉಮೇಶ್ ಮಂಜುನಾಥ್ ಭಟ್ ಅಡಿಗ ಮತ್ತು ನ್ಯಾ. ತಲಕಾಡ್ ಗಿರಿಗೌಡ ಶಿವಶಂಕರೇಗೌಡ ಅವರು ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು.