Webdunia - Bharat's app for daily news and videos

Install App

ನಿಧಿಯ ಮೇಲಿನ ಆಸೆಯಿಂದ ಸ್ವಂತ ಅಜ್ಜಿಯನ್ನೇ ದೇವರಿಗೆ ಬಲಿ ಕೊಟ್ಟ ಪಾಪಿ ಮೊಮ್ಮಗ

Webdunia
ಶುಕ್ರವಾರ, 22 ಫೆಬ್ರವರಿ 2019 (08:57 IST)
ಶಿರಸಿ : ಮೊಮ್ಮಗನೊಬ್ಬ ನಿಧಿಯ ಮೇಲಿನ ಆಸೆಯಿಂದ ಸ್ವಂತ ಅಜ್ಜಿಯನ್ನೇ ದೇವರಿಗೆ ಬಲಿ ನೀಡುವ ನೆಪದಲ್ಲಿ ಕೊಲೆ ಮಾಡಿದ  ಘಟನೆ ಶಿರಸಿಯ ಬದನಗೋಡ ಗ್ರಾಮದಲ್ಲಿ ನಡೆದಿದೆ.


ಯಲ್ಲವ್ವ ಗೊಲ್ಲರ್ (75) ಮೊಮ್ಮಗನಿಂದ ಕೊಲೆಯಾದ ಅಜ್ಜಿ. ರಮೇಶ್ ಗೊಲ್ಲರ್ ಕೊಲೆ ಮಾಡಿದ ಆರೋಪಿ. ಈತನಿಗೆ ಕನಸಿನಲ್ಲಿ ಹುಲಿಯಮ್ಮ ದೇವರು ಬಂದು ನಿನಗೆ ನಿಧಿ ಸಿಗುತ್ತದೆ ಅದಕ್ಕಾಗಿ ನೀನು ಐದು ನರಬಲಿ ಕೊಡಬೇಕು ಎಂಬುದಾಗಿ ಹೇಳಿತ್ತಂತೆ.


ಅದಕ್ಕಾಗಿ ಈತ ಈ ಹಿಂದೆ ಮಳಗಿ ಡ್ಯಾಮ್ ಬಳಿ ಬಾಲಕನೋರ್ವವನನ್ನು ಕೊಲೆ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಆದರೆ ಇದೀಗ ಜಾಮೀನಿನ ಮೂಲಕ ಹೊರ ಬಂದಿದ್ದ ರಮೇಶ್ ಗೊಲ್ಲರ್ ನಿಧಿಯ ಆಸೆಗೆ ಎರಡನೇ ಬಲಿಯಾಗಿ ತನ್ನ ಅಜ್ಜಿಯ ಕುತ್ತಿಗೆ ಕಡಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments