Webdunia - Bharat's app for daily news and videos

Install App

ನನ್ನ ಕ್ಷೇತ್ರದ ಅನುದಾನ ವಾಪಸ್ ಬಂದೇ ಬರುತ್ತೆ- ಮುನಿರತ್ನ

Webdunia
ಗುರುವಾರ, 19 ಅಕ್ಟೋಬರ್ 2023 (14:24 IST)
126 ಕೋಟಿ ಅನುದಾನ ವಾಪಸ್ ಪ್ರಕರಣ ಬಗ್ಗೆ‌ ಮುನಿರತ್ನ ಪ್ರತಿಕ್ರಿಯಿಸಿದ್ದು.ನನ್ನ ಕ್ಷೇತ್ರದ ಅನುದಾನ ಬೇರೆ ಕ್ಷೇತ್ರಗಳಿಗೆ ವರ್ಗಾವಣೆ ಮಾಡಲಾಗಿದೆ.ನಮ್ಮ ಅನುದಾನ ಬೇರೆ ಕ್ಷೇತ್ರಗಳಿಗೆ ಹೇಗೆ ಕೊಡ್ತಾರೆ ಅವರು?ಡಿಸಿಎಂ ಅವರು ಕಾಮಗಾರಿಗಳ ಪಟ್ಟಿ ಕೇಳಿದ್ರು, ಅವರು ಕೇಳಿದ ವಿವರ ಸಲ್ಲಿಸಿದ್ದೇನೆ.ನನಗೆ ನಂಬಿಕೆ ಇದೆ, ನನ್ನ ಕ್ಷೇತ್ರದ ಅನುದಾನ ವಾಪಸ್ ಬಂದೇ ಬರುತ್ತೆ, ಅವರು ಅನುದಾನ ಕೊಡದಿದ್ರೆ ಮುಂದೇನು ಮಾಡಬೇಕೆಂದು ತಿಳಿಸ್ತೇನೆ.ಅನುದಾನ ವಾಪಸ್ ಬರದಿದ್ರೆ ಮತ್ತೆ ಪ್ರತಿಭಟನೆನೂ ಮಾಡಲ್ಲ, ಕಾಲೂ ಹಿಡಿಯಲ್ಲ ಎಂದು ಬೆಂಗಳೂರಿನಲ್ಲಿ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಹೇಳಿದ್ದಾರೆ.
 
ಬೆಳಗಾವಿ ಬಣ ರಾಜಕೀಯ ಭುಗಿಲು ವಿಚಾರವಾಗಿ ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದು,ಬೆಳಗಾವಿಯಲ್ಲಿ ಮತ್ತೆ ರಾಜಕಾರಣ ಶುರುವಾಗಿದೆ.ಈ ಮೊದಲು ಸಮ್ಮಿಶ್ರ ಸರ್ಕಾರ ಉರುಳಿದ್ದೇ ಬೆಳಗಾವಿ ರಾಜಕಾರಣದಿಂದ ,ಬೆಳಗಾವಿಯಲ್ಲಿ ರಾಜಕಾರಣ ಶುರುವಾದಾಗಲೆಲ್ಲ ಸರ್ಕಾರಗಳಿಗೆ ಗಂಡಾಂತರ ಬರುತ್ತೆ.ಬೆಳಗಾವಿಯಲ್ಲಿ ಶುರುವಾಗಿ ಬೆಂಗಳೂರಿನಲ್ಲಿ ಮುಕ್ತಾಯ ಆಗುತ್ತೆ.ಬೆಳಗಾವಿಯಲ್ಲಿ ಡಿಕೆಶಿಗೆ ಶಾಸಕರು, ಸಚಿವರು ಸ್ವಾಗತ ಕೋರದ ವಿಚಾರ ಮುನಿರತ್ನ ವ್ಯಂಗ್ಯವಾಗಿ ಮಾತನಾಡಿದ್ದಾರೆ.ನನಗೆ ಆಶ್ಚರ್ಯ ಇರೋದು, ಡಿಕೆಶಿ ಅವರನ್ನು ಸ್ವಾಗತಿಸಲು ಲಕ್ಷ್ಮಿ ಹೆಬ್ಬಾಳ್ಕರ್ ಯಾಕೆ ಹೋಗಲಿಲ್ಲ ಅಂತ.ಲಕ್ಷ್ಮಿ ಹೆಬ್ಬಾಳ್ಕರ್ ಡಿಕೆಶಿ ಅವರನ್ನು ಸ್ವಾಗತ ಮಾಡದಿರುವುದು ಎಂಟನೇ ಅದ್ಭುತ.ಸತೀಶ್ ಜಾರಕಿಹೊಳಿ ಹೋಗದೇ ಇರುವುದರಲ್ಲಿ ವಿಶೇಷ ಏನೂ ಇಲ್ಲ ಬಿಡಿ ಎಂದು ಮುನಿರತ್ನ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments