Webdunia - Bharat's app for daily news and videos

Install App

ವಚನ ತಿರುಚಿದ ಆರೋಪ: ಸುಪ್ರೀಂಕೋರ್ಟ್ ನಲ್ಲಿ ಮಾತೆ ಮಹಾದೇವಿಗೆ ಭಾರೀ ಹಿನ್ನಡೆ

Webdunia
ಬುಧವಾರ, 20 ಸೆಪ್ಟಂಬರ್ 2017 (21:24 IST)
ಬೆಂಗಳೂರು: ವಿವಾದಿತ ಪುಸ್ತಕ `ಬಸವ ವಚನ ದೀಪ್ತಿ’ಗೆ  ಸಂಬಂಧಿಸಿದಂತೆ ಮಾತೆ ಮಹಾದೇವಿಗೆ ಭಾರೀ ಹಿನ್ನಡೆಯಾಗಿದೆ. ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

1998ರಲ್ಲಿ `ಬಸವ ವಚನ ದೀಪ್ತಿ’ ಪುಸ್ತಕವನ್ನು ಅಂದಿನ ರಾಜ್ಯ ಸರ್ಕಾರ ನಿಷೇಧಿಸಿತ್ತು. ಈ ಪುಸ್ತಕದಲ್ಲಿ ಮಾತೆ ಮಹಾದೇವಿ ಬಸವಣ್ಣನವರ ವಚನಗಳನ್ನು ತಿರುಚಿದ್ದ ಆರೋಪ ಹೊತ್ತಿದ್ದರು. ಇದರಲ್ಲಿ ಮಾತೆ ಮಹಾದೇವಿ ವಚನಗಳಲ್ಲಿ ಕೂಡಲಸಂಗಮ ದೇವ ಬದಲು ಲಿಂಗದೇವ ಎಂಬ ಅಂಕಿತನಾಮ ಬದಲಿಸಿದ್ದರು. ಈ ಪುಸ್ತಕವನ್ನು ವಿರಶೈವ ಮಹಾಸಭಾ ಸಹ ವಿರೋಧಿಸಿತ್ತು.

ಇದೇ ಸಂದರ್ಭದಲ್ಲಿ ಪುಸ್ತಕ ನಿಷೇಧ ಕ್ರಮ ಸರಿಯಲ್ಲ ಎಂದು ಮಾತೆ ಮಹಾದೇವಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ರಾಜ್ಯ ಸರ್ಕಾರದ ನಿಷೇಧ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಬಳಿಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾತೆ ಮಹಾದೇವಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ನ್ಯಾಯಮೂರ್ತಿ ಎಸ್.ಎ.ಬೋಬಡೆ, ನ್ಯಾ. ಎಲ್.ನಾಗೇಶ್ವರ್ ರಾವ್ ಅವರಿದ್ದ ಪೀಠ ಮಾತೆ ಮಹಾದೇವಿ ಅರ್ಜಿಯನ್ನು ವಜಾ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments