Webdunia - Bharat's app for daily news and videos

Install App

ಜಿ ಎಸ್ ಟಿ ದರ ಶೇ 5 ರಿಂದ 8 ಕ್ಕೆ ಹೆಚ್ಚಳವಾಗುವ ಸಾಧ್ಯತೆ

Webdunia
ಭಾನುವಾರ, 6 ಮಾರ್ಚ್ 2022 (20:48 IST)
ಜಿಎಸ್‌ಟಿ ಮಂಡಳಿಯು ತನ್ನ ಮುಂದಿನ ಸಭೆಯಲ್ಲಿ ಕಡಿಮೆ ಹಂತದ ತೆರಿಗೆ ದರವನ್ನು ಈಗಿರುವ ‌ಶೇ 5ರಿಂದ ಶೇ 8ಕ್ಕೆ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
 
ವರಮಾನ ಸಂಗ್ರಹ ಹೆಚ್ಚಿಸಲು ಇರುವ ಮಾರ್ಗಗಳ ಕುರಿತಾಗಿ ರಾಜ್ಯ ಹಣಕಾಸು ಸಚಿವರ ಸಮಿತಿಯು ವರದಿ ಸಿದ್ಧಪಡಿಸಿದ್ದು, ‌ಈ ತಿಂಗಳ ಅಂತ್ಯದ ಒಳಗಾಗಿ ಜಿಎಸ್‌ಟಿ ಮಂಡಳಿಗೆ ಅದನ್ನು ಸಲ್ಲಿಸುವ ನಿರೀಕ್ಷೆ ಇದೆ.
 
ಜಿಎಸ್‌ಟಿ ಮಂಡಳಿಯು ಇದೇ ತಿಂಗಳು ಅಥವಾ ಮುಂದಿನ ತಿಂಗಳ ಆರಂಭದಲ್ಲಿ ಸಭೆ ಸೇರಬಹುದು ಎಂದು ಮೂಲಗಳು ತಿಳಿಸಿವೆ.
 
ಸದ್ಯ ಶೇ 5, ಶೇ 12, ಶೇ 18, ಶೇ 28 ಹೀಗೆ ನಾಲ್ಕು ಹಂತದ ತೆರಿಗೆ ದರಗಳಿವೆ. ಇವುಗಳಲ್ಲಿ ಅತ್ಯಂತ ಕಡಿಮೆ ಹಂತದ ಶೇ 5ರಷ್ಟು ಇರುವ ತೆರಿಗೆ ದರವನ್ನು ಶೇ 8ಕ್ಕೆ ಹೆಚ್ಚಿಸುವ ಕುರಿತು ಸಮಿತಿಯು ಪ್ರಸ್ತಾಪಿಸುವ ಸಾಧ್ಯತೆ ಇದೆ. ಹೀಗೆ ಮಾಡುವುದರಿಂದ ಸರ್ಕಾರಕ್ಕೆ ವಾರ್ಷಿಕ ₹ 1.50 ಲಕ್ಷ ಕೋಟಿಗಳಷ್ಟು ಹೆಚ್ಚುವರಿ ವರಮಾನ ಬರಲಿದೆ.
 
ತೆರಿಗೆ ಹಂತವನ್ನು ಇನ್ನಷ್ಟು ಸರಳಗೊಳಿಸುವ ಉದ್ದೇಶ ಇದೆ. ಈ ಸಲುವಾಗಿ ಶೇ 8, ಶೇ 18 ಮತ್ತು ಶೇ 28ರ ಮೂರು ಹಂತದ ತೆರಿಗೆ ವ್ಯವಸ್ಥೆ ರೂಪಿಸುವ ಬಗ್ಗೆಯೂ ಸಮಿತಿಯು ಸಲಹೆ ನೀಡಲಿದೆ. ಹೀಗಾದಲ್ಲಿ, ಸದ್ಯ ಶೇ 12ರ ತೆರಿಗೆ ದರದಲ್ಲಿ ಬರುವ ಸರಕು ಮತ್ತು ಸೇವೆಗಳು ಶೇ 18ರ ತೆರಿಗೆ ದರದ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ಹೇಳಿವೆ.
 
ವರಮಾನ ಹೆಚ್ಚಿಸಿಕೊಳ್ಳಲು ಮತ್ತು ರಾಜ್ಯ ಸರ್ಕಾರಗಳು ಜಿಎಸ್‌ಟಿ ಪರಿಹಾರಕ್ಕಾಗಿ ಕೇಂದ್ರದ ಮೇಲೆ ಅವಲಂಬಿತವಾಗುವುದನ್ನು ತಪ್ಪಿಸಲು ಅನುಕೂಲ ಆಗುವಂತೆ ತೆರಿಗೆ ವಿನಾಯಿತಿ ಪಟ್ಟಿಯಲ್ಲಿ ಇರುವ ಸರಕು ಮತ್ತು ಸೇವೆಗಳ ಸಂಖ್ಯೆಯನ್ನು ಕಡಿಮೆ ಮಾಡುವಂತೆಯೂ ಸಮಿತಿಯು ಸಲಹೆ ನೀಡಲಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ತಲಾದಾಯದಲ್ಲಿ ದೇಶದಲ್ಲೇ ಕರ್ನಾಟಕ NO.1:ಇದೆಲ್ಲ ಗ್ಯಾರಂಟಿ ಯೋಜನೆ ಕೊಡುಗೆ ಎಂದ ಸಿಎಂ

ಮುಂದಿನ ಸುದ್ದಿ
Show comments