Select Your Language

Notifications

webdunia
webdunia
webdunia
webdunia

ಪ್ರೀತಿಯಿಂದ ನೀಡಿರುವ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಕೆ ಶಿವಕುಮಾರ್ ಪುನರುಚ್ಚಾರ

CM DK Shivkumar
ಬೆಂಗಳೂರು: ನಮ್ಮ ಸರ್ಕಾರ ಪ್ರೀತಿಯಿಂದ ನೀಡಿರುವ ಯಾವುದೇ ಗ್ಯಾರಂಟಿ ಯೋಜನಗೆಳನ್ನು ಯಾವುದೇ ಕಾರಣಕ್ಕೂ  ನಿಲ್ಲಿಸಲಾಗುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಪುನರುಚ್ಚರಿಸಿದರು.

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡುತ್ತಿವೆಯಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಇರುವುದೇ ಟೀಕೆ ಮಾಡಲು. ನಾವು ಏನೇ ಒಳ್ಳೆಯದು ಮಾಡಲು ಮುಂದಾದರೂ ಅದಕ್ಕೆ ಅಡ್ಡಗಾಲು ಹಾಕುವುದಕ್ಕೆ ವಿರೋಧ ಪಕ್ಷಗಳಿರುವುದು. ಅವರ ಕೈಯಲ್ಲಿ ಆಗದಿದ್ದ ಕೆಲಸ ನಾವು ಮಾಡುತ್ತಿದ್ದೇವೆ ಎಂದು ಕೌಂಟರ್ ನೀಡಿದರು. 

ಇನ್ನೂ ಆರಂಭದಲ್ಲಿ ಕೆಲವು ಫಲಾನುಭವಿಗಳು ಬೇರೆಯವರ ದೂರವಾಣಿ ಸಂಖ್ಯೆ ಹಾಗೂ ಇತರೆ ಮಾಹಿತಿ ನೀಡಿದ್ದಾರೆ. ಬೇರೆಯವರ ಖಾತೆಗೆ ಹಣ ಹೋಗುತ್ತಿರುವ ಬಗ್ಗೆ ನಮಗೆ ಮಾಹಿತಿ ಇದೆ. ಫಲಾನುಭವಿಗಳ ಖಾತೆಗೆ ಹಣ ಹೋಗುವಂತೆ ಮಾಡುವುದು ಸರ್ಕಾರದ ಉದ್ದೇಶ ಎಂದು ಸ್ಪಷ್ಟನೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದಲ್ಲಿ ಉಚಿತ ಬಸ್ ಯೋಜನೆ ಚಾಲನೆ ಸಂದರ್ಭದಲ್ಲೇ ಅವಾಂತರ: ಸಚಿವೆಯ ಮುಖ, ಮೂತಿಗೆಲ್ಲಾ ಪಾಯಸ ಅಭಿಷೇಕ Video