ಲಾಡ್ಜ್ ಮ್ಯಾನೇಜರ್ ನನ್ನು ಕೊಂದ ಆರೋಪಿಗೆ ಗುಂಡೇಟು

Webdunia
ಶನಿವಾರ, 19 ಜನವರಿ 2019 (19:12 IST)
ಲಾಡ್ಜ್ ಮ್ಯಾನೇಜರ್ ಒಬ್ಬರನ್ನು ಹಾಡುಹಗಲೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಗುಂಡು ಹೊಡೆದು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಲಬುರ್ಗಿಯಲ್ಲಿ ಪೊಲೀಸರಿಂದ ಕೊಲೆ ಆರೋಪಿಗೆ ಗುಂಡೇಟು ಬಿದ್ದಿದೆ.  
ಕಲಬುರ್ಗಿ ಬಸ್ ನಿಲ್ದಾಣದ ಮುಂದೆ ಹಾಡುಹಗಲೇ ಲಾಡ್ಜ್ ಮ್ಯಾನೇಜರ್ ನನ್ನು ಕೊಚ್ಚಿ ಕೊಂದ ಆರೋಪಿಗೆ ಗುಂಡೇಟು ತಗುಲಿದೆ.

ಸಂತೋಷ ಸ್ವಾಮಿ ಗುಂಡೇಟಿನಿಂದ ಗಾಯಗೊಂಡ ಕೊಲೆ ಆರೋಪಿಯಾಗಿದ್ದಾನೆ. ಆರೋಪಿಯನ್ನು
ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆರೋಪಿ ಸಂತೋಷ ಸ್ವಾಮಿ ದಾಳಿಯಿಂದ ತಪ್ಪಿಸಿಕೊಳ್ಳಲು ಆತ್ಮರಕ್ಷಣೆಗಾಗಿ ಕೊಲೆ ಆರೋಪಿಯ ಮೇಲೆ ಎರಡು ಸುತ್ತು ಗುಂಡು ಹಾರಿಸಿದ್ದಾರೆ ಪೊಲೀಸರು.  ಆರ್.ಜಿ ನಗರ ಪಿ.ಎಸ್.ಐ ಮಹಾಂತೇಶ ಫೈರಿಂಗ್ ನಡೆಸಿ ಬಂಧಿಸಿದ್ದಾರೆ.

ಈ ಘಟನೆ ಶಹಾಬಾದ ಬಳಿಯ ವಾಡಿ ರಸ್ತೆಯಲ್ಲಿ ನಡೆದಿದೆ. ಗಾಯಾಳು ಪೊಲೀಸರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುಂಡೇಟಿನಿಂದ ಗಾಯಗೊಂಡ ಕೊಲೆ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments