Webdunia - Bharat's app for daily news and videos

Install App

ಲಾಡ್ಜ್ ಮ್ಯಾನೇಜರ್ ನನ್ನು ಕೊಂದ ಆರೋಪಿಗೆ ಗುಂಡೇಟು

Webdunia
ಶನಿವಾರ, 19 ಜನವರಿ 2019 (19:12 IST)
ಲಾಡ್ಜ್ ಮ್ಯಾನೇಜರ್ ಒಬ್ಬರನ್ನು ಹಾಡುಹಗಲೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಗುಂಡು ಹೊಡೆದು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಲಬುರ್ಗಿಯಲ್ಲಿ ಪೊಲೀಸರಿಂದ ಕೊಲೆ ಆರೋಪಿಗೆ ಗುಂಡೇಟು ಬಿದ್ದಿದೆ.  
ಕಲಬುರ್ಗಿ ಬಸ್ ನಿಲ್ದಾಣದ ಮುಂದೆ ಹಾಡುಹಗಲೇ ಲಾಡ್ಜ್ ಮ್ಯಾನೇಜರ್ ನನ್ನು ಕೊಚ್ಚಿ ಕೊಂದ ಆರೋಪಿಗೆ ಗುಂಡೇಟು ತಗುಲಿದೆ.

ಸಂತೋಷ ಸ್ವಾಮಿ ಗುಂಡೇಟಿನಿಂದ ಗಾಯಗೊಂಡ ಕೊಲೆ ಆರೋಪಿಯಾಗಿದ್ದಾನೆ. ಆರೋಪಿಯನ್ನು
ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆರೋಪಿ ಸಂತೋಷ ಸ್ವಾಮಿ ದಾಳಿಯಿಂದ ತಪ್ಪಿಸಿಕೊಳ್ಳಲು ಆತ್ಮರಕ್ಷಣೆಗಾಗಿ ಕೊಲೆ ಆರೋಪಿಯ ಮೇಲೆ ಎರಡು ಸುತ್ತು ಗುಂಡು ಹಾರಿಸಿದ್ದಾರೆ ಪೊಲೀಸರು.  ಆರ್.ಜಿ ನಗರ ಪಿ.ಎಸ್.ಐ ಮಹಾಂತೇಶ ಫೈರಿಂಗ್ ನಡೆಸಿ ಬಂಧಿಸಿದ್ದಾರೆ.

ಈ ಘಟನೆ ಶಹಾಬಾದ ಬಳಿಯ ವಾಡಿ ರಸ್ತೆಯಲ್ಲಿ ನಡೆದಿದೆ. ಗಾಯಾಳು ಪೊಲೀಸರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುಂಡೇಟಿನಿಂದ ಗಾಯಗೊಂಡ ಕೊಲೆ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments