ಲಾಕ್ ಡೌನ್ ನಲ್ಲಿ ಜನರ ಕಷ್ಟಕ್ಕೆ ಮಿಡಿದ ಪೊಲೀಸ್‌ ಹೃದಯ

Webdunia
ಶನಿವಾರ, 2 ಮೇ 2020 (15:22 IST)
ಲಾಕ್ ಡೌನ್ ನಲ್ಲಿ ಜನರ ಕಷ್ಟಕ್ಕೆ ಪೊಲೀಸ್ ಹೃದಯವೊಂದು ವಿನೂತನವಾಗಿ ಮಿಡಿದು ಗಮನ ಸೆಳೆದಿದೆ.

ಲಾಕ್‌ಡೌನ್‌ ಅವಧಿಯಲ್ಲಿ ಹಾವೇರಿ ಜಿಲ್ಲೆಯಲ್ಲಿ ರಕ್ತದ ತೀವ್ರ ಅಭಾವ ಇರುವುದನ್ನು ಮನಗಂಡು ರಕ್ತದಾನಿಗಳಿಗೆ ಉಚಿತ ವಾಹನ ವ್ಯವಸ್ಥೆ ಮಾಡುವ ಮೂಲಕ ಕಾನ್‌ಸ್ಟೆಬಲ್‌ ಕರಬಸಪ್ಪ ಗೊಂದಿ ಅವರು ಜಿಲ್ಲೆಯ ಜನರ ಮನಗೆದ್ದಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್‌ ತಾಲ್ಲೂಕು ಆಡೂರು ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್‌ ಕರಬಸಪ್ಪ ಗೊಂದಿ ಅವರು ಇದುವರೆಗೆ ಸ್ವತಃ 27 ಬಾರಿ ರಕ್ತದಾನ ಮಾಡಿದ್ದಾರೆ. ರಕ್ತದಾನ ಮತ್ತು ನೇತ್ರದಾನ ಕ್ಷೇತ್ರದ ಅನನ್ಯ ಸೇವೆ ಮಾಡಿರುವ ಇವರು ಇನ್ಕ್ರೆಡಿಬಲ್ ಬುಕ್ ಆಫ್ ರೆಕಾರ್ಡ್ ಮತ್ತು ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ವತಿಯಿಂದ 2 ರಾಷ್ಟ್ರೀಯ ದಾಖಲೆ, 2 ವಿಶ್ವ ದಾಖಲೆ ಮಾಡಿದ್ದಾರೆ.

ಕಾನ್‌ಸ್ಟೆಬಲ್‌ ಕರಬಸಪ್ಪ ಗೊಂದಿ ಮಾತನಾಡಿ, ಬೆಲೆ ಬಾಳುವ ವಾಹನಗಳಿಗೆ ಸರ್ವಿಸ್‌ ಮಾಡಿಸುವ ರೀತಿಯಲ್ಲೇ, ಬೆಲೆ ಕಟ್ಟಲಾಗದ ದೇಹಕ್ಕೆ ಸರ್ವಿಸ್‌ ಮಾಡಿಸುವ ವಿಧಾನವೇ ರಕ್ತದಾನ. ಲಾಕ್‌ಡೌನ್‌ ಅವಧಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇದ್ದ ಕಾರಣ ಎನ್‌ಎಸ್‌ಎಸ್‌, ಎನ್‌ಸಿಸಿ, ರೆಡ್‌ಕ್ರಾಸ್‌ ವತಿಯಿಂದ ಉಚಿತ ರಕ್ತದಾನ ಶಿಬಿರ ನಡೆಯಲಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ನಿತ್ಯ 10 ಮಂದಿ ಶಸ್ತ್ರಚಿಕಿತ್ಸೆಗೆ ಒಳಪಡುತ್ತಾರೆ.

ಇವರಿಗೆ ಅತ್ಯಗತ್ಯವಾಗಿ ಬೇಕಿರುವ ರಕ್ತ ಸಿಗುತ್ತಿರಲಿಲ್ಲ. ಎಲ್ಲ ಬ್ಲಡ್‌ ಬ್ಯಾಂಕ್‌ಗಳಲ್ಲೂ ರಕ್ತದ ಕೊರತೆ ಕಾಡುತ್ತಿತ್ತು. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ರಕ್ತದಾನ ಬಗ್ಗೆ ಪ್ರಕಟಣೆ ನೀಡಿ, 41 ಮಂದಿಯಿಂದ ರಕ್ತದಾನ ಮಾಡಿಸಿದ್ದೇನೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments