Select Your Language

Notifications

webdunia
webdunia
webdunia
webdunia

ಸಚಿವರಾಗುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಹುಕ್ಕೇರಿ

ಸಚಿವರಾಗುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಹುಕ್ಕೇರಿ
ಬೆಳಗಾವಿ , ಗುರುವಾರ, 7 ಜೂನ್ 2018 (17:46 IST)
ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಸತೀಶ್ ಜಾರಕಿಹೊಳಿ ಅಸಮಾಧಾನ ವಿಚಾರವಾಗಿ ಬೆಳಗಾವಿಯಲ್ಲಿ ಸಂಸದ ಪ್ರಕಾಶ ಹುಕ್ಕೇರಿ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾನು ಸತೀಶ್ ಜಾರಕಿಹೊಳಿ ಅಲ್ಲಾ. ನಾನು ಪ್ರಕಾಶ ಹುಕ್ಕೇರಿ ಅದೀನಿ. ಯಾಕೇ ಸತೀಶ ಜಾರಕಿಹೊಳಿ ಅಸಮಾಧಾನ ಆಗಿದ್ದಾರೆ ಅವರನ್ನೆ ಹೋಗಿ ಕೇಳಿ. ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿಗೆ ಒಂದು ಸಚಿವ ಸ್ಥಾನ ಸಿಕ್ಕಿದೆ. ರಮೇಶ ಜಾರಕಿಹೊಳಿಗೆ ಮಂತ್ರಿ ಆಗಿದ್ದಾರೆ ಎಂದು ತಿಳಿಸಿದ್ದಾರೆ. 
 
ಬೆಳಗಾವಿ ಜಿಲ್ಲೆಗೆ ಇನ್ನೊಂದು ಮಂತ್ರಿ ಸ್ಥಾನ ನೀಡುವಂತೆ ಕೇಳಿದ್ದೇವೆ. ಇನ್ನು ಆರು ಮಂತ್ರಿ ಸ್ಥಾನ ಭರ್ತಿ ಮಾಡಬೇಕಿದೆ. ನಾನೇನು ಎಲ್ಲಿಯೂ ನನ್ನ ಮಗ ಗಣೇಶ ಹುಕ್ಕೇರಿಗೆ ಮಂತ್ರಿ ಸ್ಥಾನಕೊಡುವಂತೆ ಕೇಳಿಲ್ಲ. ಆದ್ರೆ ಜಿಲ್ಲೆಯಲ್ಲಿ ಇನ್ನೂ ಏಳು ಜನ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಬೆಳಗಾವಿ ದೊಡ್ಡ ಜಿಲ್ಲೆಯಾಗಿದೆ. ಇನ್ನೊಂದು ಮಂತ್ರಿ ಸ್ಥಾನ ಕೊಡುವಂತೆ ನಾವು ಹೈಕಮಾಂಡ್‌ಗೆ ಹೇಳಿದ್ದೇವೆ ಎಂದರು. 
 
ಮಂತ್ರಿ ಪಟ್ಟಯಾರಿಗೆ ಕೊಡಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದ ಸಂಸದ ಪ್ರಕಾಶ ಹುಕ್ಕೇರಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹುಬ್ಬಳ್ಳಿ: ಮಂತ್ರಿಗಿರಿಗಾಗಿ ಅಹೋರಾತ್ರಿ ಧರಣಿ