Webdunia - Bharat's app for daily news and videos

Install App

ನಗರದ ರಸ್ತೆಗಳು ಪದೇಪದೆ ಗುಂಡಿ ಬೀಳುತ್ತಿರುವ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್

Webdunia
ಶನಿವಾರ, 16 ಅಕ್ಟೋಬರ್ 2021 (21:58 IST)
ಬೆಂಗಳೂರು: ನಗರದ ರಸ್ತೆಗಳು ಪದೇಪದೆ ಗುಂಡಿ ಬೀಳುತ್ತಿರುವ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಬಿಬಿಎಂಪಿಗೆ ತಾಕೀತು ಮಾಡಿದೆ.
ಬೆಂಗಳೂರಿನ ರಸ್ತೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
ವಿಚಾರಣೆ ಸಂದರ್ಭದಲ್ಲಿ ಬಿಬಿಎಂಪಿ ವಕೀಲರು, ನಗರದಾದ್ಯಂತ ಪ್ರತಿದಿನ ಗುಂಡಿ ಮುಚ್ಚುತ್ತಿದ್ದೇವೆ. ಮಳೆ ಕಾರಣದಿಂದ ಗುಂಡಿ ಮುಚ್ಚುವ ಕೆಲಸ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ ಎಂಬ ಹೇಳಿಕೆಯನ್ನು ಟೀಕಿಸಿರುವ ನ್ಯಾಯಾಲಯ, ಪಾಲಿಕೆಯ ಮಸೂರದಲ್ಲೇ ಸಮಸ್ಯೆ ಇದೆ. ಹೀಗಾಗಿಯೇ ಪಾಲಿಕೆಗೆ ಕೇವಲ ಸಚಿವರ ಮನೆ, ಹೈಕೋರ್ಟ್ ಹಾಗೂ ವಿಧಾನಸೌಧಗಳ ಮುಂದಿನ ರಸ್ತೆಗಳು ಮಾತ್ರ ಕಾಣಿಸುತ್ತಿವೆ. ಅದರಲ್ಲಿ ಜನಸಾಮಾನ್ಯರು ಸಂಚರಿಸುವ ರಸ್ತೆಗಳು ಕಾಣುತ್ತಿಲ್ಲ ಎಂದು ಚಾಟಿ ಬೀಸಿದೆ.ಅಂತಿಮವಾಗಿ, ನಗರದ ಎಲ್ಲ ರಸ್ತೆಗಳಲ್ಲಿನ ಗುಂಡಿಗಳನ್ನೂ ಮುಚ್ಚಬೇಕು ಹಾಗೂ ಗುಂಡಿ ಮುಚ್ಚುವ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಪಾಲಿಕೆಗೆ ನಿರ್ದೇಶಿಸಿರುವ ಹೈಕೋರ್ಟ್, ಕಾಮಗಾರಿಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು 2 ವಾರಗಳಲ್ಲಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನ.11ಕ್ಕೆ ಮುಂದೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments