Webdunia - Bharat's app for daily news and videos

Install App

ವಿಧಾನಸೌಧ ಗೇಟ್ ನಲ್ಲಿ ಹಣ ವಶ ಪ್ರಕರಣ: ಸಚಿವರಿಗೆ ಸಂಬಂಧವಿಲ್ಲ ಎಂದ ಹೋಮ್ ಮಿನಿಸ್ಟರ್

Webdunia
ಶನಿವಾರ, 5 ಜನವರಿ 2019 (19:44 IST)
ವಿಧಾನಸೌಧದ ವೆಸ್ಟ್ ಗೇಟ್ ನಲ್ಲಿ 25.73 ಲಕ್ಷ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದು, ಸಚಿವರಿಗೆ ಸಂಬಂಧವಿಲ್ಲ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದು, ಮಿನಿಸ್ಟರ್ ಆಫೀಸ್ ನಲ್ಲಿ ಡ್ರೈವರ್ ಇರ್ತಾರೆ,  ಪಿಎ, ಸಿಬ್ಬಂದಿ ಇರ್ತಾರೆ. ಅವರೆಲ್ಲಾ ಈ ರೀತಿ ಮಾಡಿದ್ರೆ ಸಚಿವರಿಗೇನು ಸಂಬಂಧ? ಎಂದರು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ  ಸಂಬಂಧಪಟ್ಟ ಸಚಿವರು ಹೇಳಿಕೆ ಕೊಡುತ್ತಾರೆ. ಅದಾಗಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಇನ್ನು ಚಡಚಣ ನಕಲಿ ಎನ್ ಕೌಂಟರ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಈಗಾಗಲೇ ಆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಚಾಜ್೯ ಸೀಟ್ ಸಲ್ಲಿಕೆಯಾಗಿವೆ.

ಅಲ್ಲದೆ ಇನ್ನೊಂದು ಹೆಚ್ಚುವರಿ ಚಾಜ್೯ ಸೀಟ್ ಸಲ್ಲಿಕೆಗೆ ತಯಾರಿ ನಡೆದಿದೆ. ನಮ್ಮ ಸಿಐಡಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಗೌರಿ ಲಂಕೇಶ್ ಹಾಗೂ ಕಲಬುರ್ಗಿ ಕೇಸ್ ನಲ್ಲಿ ಕೂಡ ನಮ್ಮ ಪೊಲೀಸರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆ ಕೇಸ್ ಈಗಾಗಲೇ ಅಂತಿಮ ಘಟ್ಟದಲ್ಲಿದೆ ಎಂದು ತಿಳಿಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments