Webdunia - Bharat's app for daily news and videos

Install App

ಎಚ್ಚರ ತಪ್ಪಿದ ಅಡುಗೆ ಸಹಾಯಕಿ - ಬಿಸಿ ಬಿಸಿ ಸಾಂಬಾರ್ ಮೂವರು ಮಕ್ಕಳ ಮೈಮೇಲೆ ಬಿತ್ತು

Webdunia
ಗುರುವಾರ, 12 ಡಿಸೆಂಬರ್ 2019 (15:51 IST)
ಅಂಗನವಾಡಿ ಕೇಂದ್ರದಲ್ಲಿ ಬಿಸಿ ಸಾರು ಮೈಮೇಲೆ ಬಿದ್ದ ಪರಿಣಾಮ ಮೂವರು ಮಕ್ಕಳು ಮತ್ತು ಸಹಾಯಕಿ ಗಂಭೀರ ಗಾಯಗೊಂಡಿದ್ದಾರೆ.

ಬೆಳಗಾವಿ ತಾಲ್ಲೂಕಿನ ಗೋಲ್ಯಾಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದೆ.

ಸಂಜನಾ, ಸಮೀಕ್ಷಾ, ಸಾನ್ವಿ, ಸಹಾಯಕಿ ಲೀಲಾವತಿ ಗೋರಲ್ ಎಂಬುವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಕ್ಕಳನ್ನು ಕೆ ಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಡುಗೆ ಸಹಾಯಕಿ ಲೀಲಾವತಿ ಸಾರು ತಯಾರಿಸುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಹಿಡಿದಿದ್ದ ಪಾತ್ರೆಯನ್ನು ಕೈ ಬಿಟ್ಟಿದ್ದಾರೆ. ಬಿಸಿ ಸಾರು ಅವರ ಮೇಲೆ ಹಾಗೂ ಮಕ್ಕಳ ಮೇಲೆ ಬಿದ್ದಿದ್ದರಿಂದ ಸುಟ್ಟ ಗಾಯಗಳಾಗಿವೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments