Webdunia - Bharat's app for daily news and videos

Install App

ಬಂಜೆತನ ನಿವಾರಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಸ್ವಯಂ ಘೋಷಿತ ದೇವ ಮಾನವ ಅರೆಸ್ಟ್

Webdunia
ಶನಿವಾರ, 17 ನವೆಂಬರ್ 2018 (07:44 IST)
ಮುಂಬೈ : ಬಂಜೆತನ ನಿವಾರಿಸುವುದಾಗಿ ಹೇಳಿ ಸ್ವಯಂ ಘೋಷಿತ ದೇವ ಮಾನವನೊಬ್ಬ ಮಹಿಳೆಯೊಬ್ಬಳ ಮೇಲೆ ನಿರಂತರವಾಗಿ ಎರಡು ತಿಂಗಳ ಕಾಲ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ವೈರಾರ್ ನಗರದ ನಿವಾಸಿ ಅಜಯ್ ಚೌಧರಿ (45) ಅತ್ಯಾಚಾರ ಎಸಗಿದ ಸ್ವಯಂ ಘೋಷಿತ ದೇವ ಮಾನವ ಎಂಬುದಾಗಿ ತಿಳಿದುಬಂದಿದ್ದು, ಈತ ಸುಮಾರು ವರ್ಷಗಳಿಂದ ಮಕ್ಕಳಾಗದೇ ಮಾನಸಿಕವಾಗಿ ಕುಗ್ಗಿಹೋಗಿದ್ದ 37 ವರ್ಷ ವಯಸ್ಸಿನ ವಿವಾಹಿತ ಮಹಿಳೆಯೊಬ್ಬಳಿಗೆ ಪೂಜೆ ಮಾಡಿದರೆ ಮಕ್ಕಳಾಗುವುದಾಗಿ ಹೇಳಿ, ಆಕೆಯ ಮನೆಗೆ ಬಂದು ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯನ್ನು ಬೆದರಿಸಿ ಪದೇ ಪದೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಆತನ ಕಿರುಕುಳ ಸಹಿಸದೇ ಮಹಿಳೆ ಇದೀಗ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

 

ಈ ಪ್ರಕರಣದ ಕುರಿತು ತನಿಖೆ ಚುರುಕುಗೊಳಿಸಿದ ಪೊಲೀಸರು ಅಜಯ್ ಚೌಧರಿಯನ್ನು ಶುಕ್ರವಾರ ಆತನ ಮನೆಯಲ್ಲಿಯೇ ಬಂಧಿಸಿದ್ದಾರೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 (ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ) ಹಾಗೂ 506 (ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments