Webdunia - Bharat's app for daily news and videos

Install App

ಗಾಂಜಾ ಮತ್ತಿನಲ್ಲಿ ಮನಬಂದಂತೆ ಪತ್ನಿಯನ್ನು ಚುಚ್ಚಿದ ಪತಿ

Webdunia
ಭಾನುವಾರ, 16 ಅಕ್ಟೋಬರ್ 2022 (14:43 IST)
ಕಳೆದ ಕೆಲ ವರ್ಷಗಳ ಹಿಂದೆ ರಮೇಶ್ ಹಾಗೂ ಅರ್ಪಿತಾ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು .ಇವರಿಬ್ಬರು 6 ವರ್ಷದ ಗಂಡು ಮಗು ಹಾಗೂ 4 ವರ್ಷದ ಹೆಣ್ಣು ಮಗು ಇದ್ದು ಇಬ್ಬರು ಸಹ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದಲ್ಲಿ ಜೀವನ ಸಾಗಿಸುತ್ತಿದ್ದರು ಆದರೆ ಕಳೆದ ಒಂದು ವರ್ಷದಿಂದ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಇಬ್ಬರ  ನಡುವಿನ ಜಗಳ ವಿಕೋಪಕ್ಕೆ ತಿರುಗಿ ಹೊಸಕೋಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿತು. ಈ ನಡುವೆ ಇಬ್ಬರು ಒಪ್ಪಿ ಡಿವೈರ್ಸ್ ಗೆ ಅರ್ಜಿ ಸಲ್ಲಿಸಿ ದೂರವಾಗಲು ನಿರ್ಧರಿಸಿದ್ದು ಅದರಂತೆ ಬೇರೆ ಬೇರೆ ಜೀವನ ಸಾಗಿಸುತ್ತಿದ್ದಾರೆ. ಆದರೆ ಕಳೆದ ಒಂದು ವಾರದಿಂದ ಪತ್ನಿ ಅರ್ಪಿತಾ ಮೇಲೆ ಅನುಮಾನ ಪಟ್ಟ ಪತಿ ರಮೇಶ್ ಇಬ್ಬರು ಒಟ್ಟಿಗೆ ಜೀವನ ನಡೆಸೋಣ ಎಂದು ಆಕೆಯ ಜೊತೆ ಮಾತನಾಡುತ್ತಿದ್ದ ರಮೇಶ್ ಇಂದು ಬೆಳಿಗ್ಗೆ ಆಕೆಯನ್ನು ಹೊಸಕೋಟೆ ತಾಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ಪಿಲ್ಲಗುಂಪೇ ಕೈಗಾರಿಕಾ ಪ್ರದೇಶಕ್ಕೆ ಕರೆದುಕೊಂಡು ಬಂದು ಮನಸೋಇಚ್ಛೆ ಸರಿಸುಮಾರು 15 ಭಾರಿ ಆಕೆಯನ್ನು ಚಾಕುವಿನಿಂದ ಕೊಲೆ ಮಾಡಲು ಯತ್ನಿಸಿ ತಾನೂ ಸಹ ಸಾಯಲು ಪ್ರಯತ್ನಿಸಿದ್ದಾನೆ. ತಕ್ಷಣ ಸ್ಥಳದಲ್ಲಿದ್ದವರು ಅವರಿಬ್ಬರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಅದೃಷ್ಟವಾಷತ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಪತ್ನಿ ಅರ್ಪಿತಾ ಸ್ಥಿತಿ ಗಂಭೀರವಾಗಿದ್ದು. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಕಳಿಸಿಕೊಂಡಿದ್ದಾರೆ.
 
ಒಟ್ಟಿನಲ್ಲಿ ಹಾಡಹಗಲೇ ಪತಿ ಪತ್ನಿ ಇಬ್ಬರೂ ಜನನಜಂಗುಳಿ ಇರುವ ಸ್ಥಳದಲ್ಲಿ ಚಾಕುವಿನಿಂದ ಚುಚ್ಚಿಕೊಂಡು ಕೊಲೆಗೆ ಯತ್ನಿಸಿರುವುದು ನೋಡುಗರಲ್ಲಿ ನಡುಕ ಹುಟ್ಟಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments