Webdunia - Bharat's app for daily news and videos

Install App

ಐಎಂಎ ಹಗರಣ; ಆರೋಪಿ ಬಂಧನಕ್ಕೆ ದುಬೈಗೆ ಹಾರಲಿದೆ ಆಪರೇಷನ್ ಮನ್ಸೂರ್ ತಂಡ?

Webdunia
ಶನಿವಾರ, 29 ಜೂನ್ 2019 (18:14 IST)
ಐಎಂಎ ಕಂಪನಿಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕನ ಜಾಡು ಹಿಡಿದು ಹೊರಟಿರುವ ಎಸ್ ಐ ಟಿ ಆರೋಪಿ ಮನ್ಸೂರ್ ಬಂಧನಕ್ಕೆ ದುಬೈಗೆ ಹಾರಲಿದ್ದಾರೆ ಎನ್ನಲಾಗುತ್ತಿದೆ.

ಐಎಂಎ ವಂಚಕನ ಜಾಡು ಹಿಡಿದು ಹೊರಡಲಿರುವ ಎಸ್ ಐಟಿ ಕಿರಿಯ ಅಧಿಕಾರಿಗಳಿಗೆ ಪಾಸ್ ಪೋರ್ಟ್, ವೀಸಾ ರೆಡಿ ಮಾಡಿಕೊಳ್ಳುವಂತೆ ಹಿರಿಯ ಅಧಿಕಾರಿಗಳಿಂದ ಸೂಚನೆ ನೀಡಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಯಾವ ಟೈಂ ನಲ್ಲಿ ಬೇಕಾದ್ರೂ ದುಬೈ ಗೆ ಹಾರಲಿದ್ದಾರೆ ಬೆಂಗಳೂರು ಪೊಲೀಸ್ರು.

ಈಗಾಗ್ಲೆ ಹಿರಿಯ ಅಧಿಕಾರಿಗಳ ಸೂಚನೆಯಂತೆ ತಮ್ಮ ತಮ್ಮ ಪಾಸ್ ಪೋರ್ಟ್ ಗಳನ್ನು ಸಿದ್ಧ ಮಾಡಿಕೊಂಡಿದ್ದಾರೆ  ಅಧಿಕಾರಿಗಳು. ಮನ್ಸೂರ್ ದುಬೈ ನಲ್ಲೇ ಇರುವ ಮಾಹಿತಿ ಕಲೆ ಹಾಕಿರುವ ಎಸ್ಐಟಿ ಅಧಿಕಾರಿಗಳು, ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ದುಬೈ ನಿಂದ ಬೇರೆಡೆಗೆ ಮನ್ಸೂರ್ ತೆರಳುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.  

ಹೀಗಾಗಿ ಮನ್ಸೂರ್ ವಾಸ್ತವ್ಯದ ಖಚಿತತೆ ಮಾಡಿಕೊಂಡು ವಿಮಾನ ಏರಲಿದ್ದಾರೆ ಎಸ್ ಐಟಿ ತಂಡ ಎಂಬ ಸುದ್ದಿ ಹರಿದಾಡುತ್ತಿದೆ.
ಎಸ್ ಐ ಟಿ ಅಧಿಕಾರಿಗಳ ಜೊತೆಗೆ ಕೆಲವು ಸಿಸಿಬಿ ಅಧಿಕಾರಿಗಳು ಆಪರೇಷನ್ ಮನ್ಸೂರ್ ನಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments