Webdunia - Bharat's app for daily news and videos

Install App

ಬ್ರೇಕ್ ಪೆಡಲ್​ಗೆ ನೀರಿನ ಬಾಟಲಿ ಸಿಕ್ಕಿಕೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು

Webdunia
ಶುಕ್ರವಾರ, 4 ಫೆಬ್ರವರಿ 2022 (20:14 IST)
ಬ್ರೇಕ್ ಪೆಡಲ್​ಗೆ ನೀರಿನ ಬಾಟಲಿ ಸಿಕ್ಕಿಕೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಯದ್ವಾತದ್ವಾ ಚಲಿಸಿ ದ್ವಿಚಕ್ರ ವಾಹನ ಮತ್ತು 2 ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಈ ಘಟನೆ ಮಂಗಳೂರು ನಗರದ ಉರ್ವಾದ ಚಿಲಿಂಬಿ-ಕೋಟೆಕಣಿ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ವಿವೇಕಾನಂದ ಶೆಣೈ ಎಂಬುವವರು ಕೋಟೆಕಣಿಯಿಂದ ಕಾರು ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಕಾರಿನಲ್ಲಿದ್ದ ವಾಟರ್​ ಬಾಟಲಿ ಕಾರಿನ ಬ್ರೇಕ್ ಪೆಡಲ್ ಅಡಿ ಸಿಲುಕಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಯರ್ರಾಬಿರ್ರಿ ಚಲಿಸಿದೆ. ಪರಿಣಾಮ 2 ದ್ವಿಚಕ್ರ ವಾಹನ ಹಾಗೂ 2 ಕಾರುಗಳಿಗೆ ಡಿಕ್ಕಿ ಹೊಡೆದು ನಿಂತಿದೆ.
ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments