Webdunia - Bharat's app for daily news and videos

Install App

ವಾಮಾಚಾರದ ನೆಪದಲ್ಲಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಘಟನೆ

Webdunia
ಮಂಗಳವಾರ, 5 ಅಕ್ಟೋಬರ್ 2021 (21:18 IST)
ಬೆಂಗಳೂರು: ವಾಮಾಚಾರದ ನೆಪದಲ್ಲಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಇದೀಗ ಮೋಸಹೋದವರು ದೂರು ನೀಡಿದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗೃಹಿಣಿ ಗೀತಾ ಗುರುದೇವ್ ನೀಡಿದ ದೂರಿನ‌ ಮೇರೆಗೆ ತ್ಯಾಗರಾಜನಗರದ ಜಯಶ್ರೀ ಹಾಗೂ ರಾಕೇಶ್ ಎಂಬುವರನ್ನು ಬಂಧಿಸಿ 1 ಕೆ. ಜಿ‌ ಚಿನ್ನ, 10 ಲಕ್ಷ ನಗದು ಹಾಗೂ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ‌. ಪ್ರಕರಣದಲ್ಲಿ ಇನ್ನೂ ಏಳು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತ್ಯಾಗರಾಜನಗರದಲ್ಲಿ ನಿವಾಸಿಯಾಗಿರುವ ಗೀತಾ ಗುರುದೇವ್ ಮನೆಗೆ ಆರೋಪಿ ಜಯಶ್ರೀ ಆಗಾಗ ಮನೆಗೆಲಸಕ್ಕೆಂದು ಬರುತ್ತಿದ್ದರು. ಕೆಲ ವರ್ಷಗಳಿಂದ ಪರಿಚಯ ಇದ್ದಿದ್ದರಿಂದ ಮೃದು ಹಾಗೂ ಸೂಕ್ಷ್ಮ ಸ್ವಭಾವದ ಗೀತಾ ಕೌಟುಂಬಿಕ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಹೇಳಿಕೊಂಡಿದ್ದಳು. ಮಹಿಳೆಯ ಮನಸ್ಥಿತಿ ಗ್ರಹಿಸಿದ್ದ ಆರೋಪಿ ವಾಮಾಚಾರ ಪೂಜೆಯಲ್ಲಿ‌ ಪರಿಣಿತಿ ಹೊಂದಿದ್ದೇನೆ. ನಿಮಗೆ ಸಂಬಂಧಿಸಿದ ಕೆಲ ವ್ಯಕ್ತಿಗಳು ನಿಮಗೆ ಮಾಟ ಮಂತ್ರ ಮಾಡಿಸಿದ್ದಾರೆ. ಇದರಿಂದ ಹೊರಬರಲು ಮಾಟ ಮಂತ್ರದ ಪೂಜೆ ಮಾಡಿಸಬೇಕಿದೆ ಎಂದು ಸಲಹೆ ನೀಡಿದ್ದಳು ಎನ್ನಲಾಗಿದೆ.
ಒಂದು ವೇಳೆ ಪೂಜೆ ಮಾಡಿಸದೆ ಹೋದರೆ ನಿಮಗೆ ತೊಂದರೆ ಆಗಬಹುದು. ಇಲ್ಲವೇ ರಕ್ತಕಾರಿ ಸಾಯಬಹುದು ಎಂದು ಭೀತಿ ಹುಟ್ಟಿಸಿದ್ದಳು. ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ಗಂಡನ ಜೊತೆ ಚರ್ಚಿಸಿ ವಾಮಾಚಾರ ಮಾಡಿಸಲು ಒಪ್ಪಿಕೊಂಡಿದ್ದಳು.
ಇದರಂತೆ ಆರೋಪಿ ಹಾಗೂ ಆಕೆಯ ಸಹಚರರು ಎಲ್ಲರೂ ಮಾಟ ಮಂತ್ರಕ್ಕೆ ಸಂಬಂಧಿಸಿದ ವಸ್ತುಗಳನ್ನ ಮನೆಯ ಮೂಲೆಗಳಲ್ಲಿ ಇಟ್ಟು ಹೋಗಿದ್ದರು. ಎಲ್ಲಾ ಮುಗಿದ ಬಳಿಕ ಮೊದಲ ಕಂತಿನಲ್ಲಿ 1.42 ಕೋಟಿ ನೀಡಿದ್ದಾರೆ. ನಂತರ 30 ಲಕ್ಷ, ಬಳಿಕ 1.72 ಕೋಟಿ ಮತ್ತೆ 1.90 ಕೋಟಿ ಹೀಗೆ ಹಲವು ಕಂತುಗಳಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಸುಮಾರು 4.41 ಕೋಟಿ ಹಣವನ್ನು ಆರೋಪಿಗಳು ಸುಲಿಗೆ ಮಾಡಿದ್ದರು. 13 ವಿವಿಧ ಬ್ಯಾಂಕ್ ಖಾತೆಗಳಿಂದ ಕೋಟಿಗಟ್ಟಲೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments