Webdunia - Bharat's app for daily news and videos

Install App

ರೈಲಿಗೆ ಬೆಂಕಿ ಹಚ್ಚಿದ ಆಗಂತುಕ; 3 ಸಾವು

Webdunia
ಬುಧವಾರ, 5 ಏಪ್ರಿಲ್ 2023 (16:31 IST)
ಕೇರಳದ ಕೋಯಿಕ್ಕೋಡ್‌ನ ತಡರಾತ್ರಿ ಚಲಿಸುತ್ತಿದ್ದ ರೈಲಿನ ಬೋಗಿಯೊಂದಕ್ಕೆ ನುಗ್ಗಿದ ಆಗಂತುಕನೊಬ್ಬ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಒಂಬತ್ತು ಮಂದಿಗೆ ಸುಟ್ಟ ಗಾಯಗಳಾಗಿವೆ. ರಾತ್ರಿ 9.30ರ ಸುಮಾರಿನಲ್ಲಿ ಅಲಪ್ಪುವ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಕಣ್ಣೂರು ಜಿಲ್ಲೆಯ ಮಹಿಳೆ, ಸುಮಾರು ಎರಡು ವರ್ಷದ ಹೆಣ್ಣು ಮಗು ಮತ್ತು ಇನ್ನೊಬ್ಬ ವ್ಯಕ್ತಿಯ ಮೃತದೇಹಗಳು ರೈಲು ಹಳಿಯ ಮೇಲೆ ಪತ್ತೆಯಾಗಿವೆ. ಗಾಯಗೊಂಡಿರುವ 9 ಮಂದಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಅವರಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಅಪರಿಚಿತ ವ್ಯಕ್ತಿಯೊಬ್ಬ ಪೆಟ್ರೋಲ್ ತರಹದ ದ್ರವ ತುಂಬಿದ್ದ ಎರಡು ಬಾಟಲಿಗಳೊಂದಿಗೆ ‘ಡಿ1’ ಕೋಚ್‌ಗೆ ನುಗ್ಗಿ ಪ್ರಯಾಣಿಕರು ಮತ್ತು ರೈಲಿನ ಬೋಗಿಗೆ ಅದನ್ನು ಚೆಲ್ಲಿ, ಬೆಂಕಿ ಹಚ್ಚಿದ ಎಂದು ರೈಲಿನಲ್ಲಿದ್ದ ಕೆಲವು ಪ್ರಯಾಣಿಕರು ತಿಳಿಸಿದ್ದಾರೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಕೆಲ ಪ್ರಯಾಣಿಕರು ರೈಲಿನ ಚೈನ್ ಎಳೆದರು. ರೈಲು ನಿಂತಿದ್ದರಿಂದ ಆರೋಪಿ ಪರಾರಿಯಾದ. ಆತನಿಗೂ ಸುಟ್ಟ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಲೇ ರೈಲಿನಿಂದ ಹಾರಿ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments