Webdunia - Bharat's app for daily news and videos

Install App

ಕುಖ್ಯಾತ ರೌಡಿಗೆ ಗುಂಡೇಟು!

Webdunia
ಭಾನುವಾರ, 27 ಜನವರಿ 2019 (14:57 IST)
ಇಬ್ಬರು ವ್ಯಾಪಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಕುಖ್ಯಾತ ರೌಡಿ ಗೌತಮ್ ಅಲಿಯಾಸ್ ಆರ್ಮುಗಂಗೆ ಯನ್ನು  ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.

ಯಶವಂತಪುರ ಮಾಡೆಲ್ ಕಾಲೋನಿಯ ರೌಡಿ ಗೌತಮ್(22)ಬಲಗಾಲಿಗೆ ಗುಂಡೇಟ್ ತಗುಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಾಣಾಪಾಯದಿಂದ ರೌಡಿ ಪಾರಾಗಿದ್ದಾನೆ. ಬಂಧಿಸಲು ಹೋದಾಗ ಗೌತಮ್ ಲಾಂಗ್ನಿಂದ ನಡೆಸಿದ ಹಲ್ಲೆಯಿಂದ ಗಾಯಗೊಂಡಿರುವ ಯಶವಂತಪುರ ಠಾಣೆಯ ಪೇದೆಗಳಾದ ಶಿವಕುಮಾರ್ ಹಾಗೂ ಭಜಂತ್ರಿ ಅವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಶವಂತಪುರ ರೈಲ್ವೆ ನಿಲ್ದಾಣ ಬಳಿಯ ಮಾಡೆಲ್ ಕಾಲೋನಿ ಬಳಿ ಪಾರ್ಟಿ ಮುಗಿದ ನಂತರ ನಡೆದ ಜಗಳದಲ್ಲಿ ರೌಡಿ ಗೌತಮ್ ಮತ್ತವನ ಸ್ನೇಹಿತರಾದ ಸಲ್ಮಾನ್ ಹಾಗೂ ಪ್ರಶಾಂತ್ ಪರಿಚಯಸ್ಥರಾದ ಚಿಲ್ಲರೆ ಅಂಗಡಿ ನಡೆಸುತ್ತಿದ್ದ ವಿನೋದ್ಕುಮಾರ್ ತರಕಾರಿ ವ್ಯಾಪಾರಿಯಾಗಿದ್ದ ಮಾರುತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದರು.

ಸ್ಥಳೀಯರು ರಕ್ಷಣೆಗೆ ಧಾವಿಸಿದ ಕೂಡಲೇ ಗೌತಮ್ ಸೇರಿ ಮೂವರು ಪರಾರಿಯಾಗಿದ್ದರು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡರು. ರೌಡಿ ಗೌತಮ್ ಮತ್ತವನ ಸ್ನೇಹಿತರಾದ ಸಲ್ಮಾನ್ ಹಾಗೂ ಪ್ರಶಾಂತ್ ಜೊತೆ ನಿನ್ನೆ ರಾತ್ರಿ 2ರ ವೇಳೆ ಪೈಪ್ಲೇನ್ ಫ್ಲಾಟಿನಂ ಸಿಟಿ ನಲ್ಲಿರುವ ಮಾಹಿತಿ ಆಧರಿಸಿ ಯಶವಂತಪುರ ಪೊಲೀಸ್ ಇನ್ಸ್ಪೆಕ್ಟರ್ ಮುದ್ದುರಾಜ್ ಅವರು ಪೇದೆಗಳಾದ ಶಿವಕುಮಾರ್ ಹಾಗೂ ಭಜಂತ್ರಿ ಇನ್ನಿತರ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ಕೈಗೊಂಡರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments