Webdunia - Bharat's app for daily news and videos

Install App

ಮೋದಿ ಸರಕಾರದಲ್ಲಿ ಜನತೆಗೆ ಸಂಕಷ್ಟ ಎದುರಾಗಿದೆ ಎಂದ ಜೆಡಿಎಸ್ ಅಧ್ಯಕ್ಷ

Webdunia
ಭಾನುವಾರ, 28 ಅಕ್ಟೋಬರ್ 2018 (17:56 IST)
ಮಂಡ್ಯ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸುದ್ದಿಗೋಷ್ಟಿ ನಡೆಸಿದ್ದು, ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮೂರು ತಿಂಗಳಿಗೋಸ್ಕರ ಚುನಾವಣೆ ಅಗತ್ಯ ಇರಲಿಲ್ಲ. ಈಗಾಗಲೇ ಫೆಬ್ರವರಿ ತಿಂಗಳಲ್ಲೇ ಲೋಕಸಭೆ ಚುನಾವಣೆ ನಡೆಸುವಂತೆ ಉತ್ತರ ಭಾರತದ ಹಲವು ರಾಜ್ಯಗಳು ಕೇಂದ್ರಗಳನ್ನು ಮನವಿ ಮಾಡಿವೆ. ಮೋದಿ ಸರ್ಕಾರದಲ್ಲಿ ಜನ ಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ ಎಂದು ದೂರಿದರು.

ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಾಗ್ತಿದೆ. ಇದಕ್ಕೆ ಮೋದಿ ಸರ್ಕಾರ ಕಾರಣ. ಸಾಮಾನ್ಯ ಜನರನ್ನು ಮೋದಿ‌ ಸರ್ಕಾರ ದುರ್ಬಲಗೊಳಿಸ್ತಿದೆ. ಇಂತಹ ಸರ್ಕಾರ ನಮಗೆ ಬೇಕಾ? ಎಂದು ಪ್ರಶ್ನಿಸಿದರು.

ಮೋದಿ ಸರ್ಕಾರ ಜನವಿರೋಧಿ‌ ಆಗಿದ್ದರೂ ಬಿಜೆಪಿ ಸಂಸದರು ಏಕೆ ತುಟಿ ಬಿಚ್ಚುತ್ತಿಲ್ಲ. ಈ ಹಿಂದೆ ಇದೇ ಶೋಭಾ ಕರಂದ್ಲಾಜೆ, ಸದಾನಂದ ಗೌಡ ಪೆಟ್ರೋಲ್ ಬೆಲೆ ಏರಿಕೆ ಆದಾಗ ಪ್ರತಿಭಟಿಸಿದ್ರು. ಈಗ ಏಕೆ ಬಿಜೆಪಿ ನಾಯಕರು ಮಾತನಾಡ್ತಿಲ್ಲ ಎಂದರು.
ರೈತರ ಆತ್ಮಹತ್ಯೆ ಬಗ್ಗೆ ಸಂಸತ್ ನಲ್ಲಿ ಏಕೆ ಚರ್ಚೆ ನಡೆದಿಲ್ಲ ಎಂದ ಅವರು, ಮೋದಿ ರೈತರ ಆತ್ಮಹತ್ಯೆ ಬಗ್ಗೆ ಏಕೆ ಮಾತಾಡ್ತಿಲ್ಲ. ಹಸಿರು ಟವಲ್ ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸುವ ಯಡಿಯೂರಪ್ಪ ಬಾಯ್ಮುಚ್ಚಿ ಕುಳಿತಿದ್ದಾರೆ ಎಂದು ಟೀಕೆ ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments