Select Your Language

Notifications

webdunia
webdunia
webdunia
webdunia

ಮಂಡ್ಯ ಜಿಲ್ಲೆ ದತ್ತು ಪಡೆದವರಂತೆ ಜೆಡಿಎಸ್ ವರ್ತನೆ- ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ ಜಿಲ್ಲೆ ದತ್ತು ಪಡೆದವರಂತೆ ಜೆಡಿಎಸ್ ವರ್ತನೆ- ಚಲುವರಾಯಸ್ವಾಮಿ ವಾಗ್ದಾಳಿ
ಕೆಆರ್ ಪೇಟೆ , ಗುರುವಾರ, 1 ಫೆಬ್ರವರಿ 2018 (20:28 IST)

ಮಂಡ್ಯ ಜಿಲ್ಲೆಯನ್ನು ದತ್ತು ಪಡೆದವರಂತೆ ವರ್ತಿಸುತ್ತಿರುವ ಜೆಡಿಎಸ್ ನಾಯಕರಿಗೆ ತಕ್ಕ ಪಾಠ ಕಲಿಸಬೇಕು ಎಂದು ಶಾಸಕ ಎನ್.ಚಲುವರಾಯ ಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ತೊರೆದ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಏಳುಜನ ಬಂಡಾಯ ಶಾಸಕರು ನಾವಾಗಿಯೇ ಜೆಡಿಎಸ್ ಬಿಡಲಿಲ್ಲ. ಇಲ್ಲದ ಕಿರುಕುಳ ನೀಡಿ ಸ್ವಾಭಿಮಾನಕ್ಕೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಿರುಕುಳ ನೀಡಿದ ಫಲವನ್ನು ಮುಂದಿನ ಚುನಾವಣೆಯಲ್ಲಿ ಅನುಭವಿಸಬೇಕಾಗುತ್ತದೆ ಎಂದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ದೊರಕಿಸುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶ್ರೀನಿವಾಸ ಶೆಟ್ಟಿ ವಿರುದ್ಧ ಆಕ್ರೋಶ