Webdunia - Bharat's app for daily news and videos

Install App

ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟ ಜೆಡಿಎಸ್. ಕಾರಣವೇನು ಗೊತ್ತಾ?

Webdunia
ಸೋಮವಾರ, 25 ಮಾರ್ಚ್ 2019 (12:18 IST)
ಬೆಂಗಳೂರು : ಸೀಟು ಹಂಚಿಕೆ ವೇಳೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿದ ಜೆಡಿಎಸ್ ಇದೀಗ ಆ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ ಎನ್ನಲಾಗಿದೆ.


ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ 8 ಕ್ಷೇತ್ರಗಳನ್ನು ಪಡೆದುಕೊಂಡಿತ್ತು. ಬೆಂಗಳೂರು ಉತ್ತರ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಕೊನೆಗೆ ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. 


ಆದರೆ ಇದೀಗ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ವಿಫಲಗೊಂಡ ಹಿನ್ನೆಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ ಎನ್ನಲಾಗಿದೆ. ಈ ಕುರಿತು ಟ್ವೀಟರ್ ನಲ್ಲಿ ಹೆಚ್.ಡಿ.ದೇವೇಗೌಡರಿಗೆ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಧನ್ಯವಾದ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments