Webdunia - Bharat's app for daily news and videos

Install App

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಚಾರಿ ನಿರೀಕ್ಷರ ಹುದ್ದೆ ಕೊಡಿಸುವುದಾಗಿ ವಂಚನೆ

Webdunia
ಶನಿವಾರ, 16 ಅಕ್ಟೋಬರ್ 2021 (21:48 IST)
ಬೆಂಗಳೂರು: ಸಾರಿಗೆ ನಿಗಮದಲ್ಲಿ ಉದ್ಯೋಗ ಕೊಡಿಸುವುದಾಗಿ ನೂರಾರು ಮಂದಿಯಿಂದ ಕೋಟ್ಯಾಂತರ ರೂ. ವಂಚಿಸಿದ ಇಬ್ಬರನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ. 
ಹಗರಿಬೊಮ್ಮನಹಳ್ಳಿಯ ಮಂಜುನಾಥ್ (45) ಹಾಗೂ ಆತನ ಗೆಳೆಯ ಅನಿಲ್ (41) ಬಂಧಿತ ಆರೋಪಿಗಳು.
ಮಂಜುನಾಥ್ ವಂಚಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದ. ಈತ ವಂಚಿಸಲೆಂದೇ ಪ್ರೀಜಾ ಕಾರೊಂದನ್ನು ಖರೀದಿಸಿ ಅದಕ್ಕೆ ಕರ್ನಾಟಕ ಸರ್ಕಾರ ಎಂಬ ಫಲಕ ಹಾಕಿಕೊಂಡು ರಾಜ್ಯದೆಲ್ಲೆಡೆ ಸುತ್ತುತ್ತಿದ್ದ. ಈ ವೇಳೆ ಕಲುಬುರಗಿ, ರಾಯಚೂರು, ಬಳ್ಳಾರಿ, ಗದಗ್ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ನಿರುದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಅವರಿಗೆ ಕೆಎಸ್‍ಆರ್ ಟಿಸಿ ಟ್ರಾಫಿಕ್ ಇನ್ ಸ್ಪೆಕ್ಟರ್ ಉದ್ಯೋಗ ಕೊಡಿಸುವುದಾಗಿ ನಂಬಿಸುತ್ತಿದ್ದ. ಬಳಿಕ ಅವರಿಂದ ಹಣ ವಸೂಲಿ ಮಾಡಿಕೊಂಡು ನಾಪತ್ತೆಯಾಗುತ್ತಿದ್ದ. ಇದುವರೆಗೂ ಸುಮಾರು 500 ಮಂದಿಗೆ ಇದೇ ರೀತಿ ವಂಚಿಸಿದ್ದಾನೆ ಎಂದು ತಿಳಿದುಬಂದಿದೆ. 
ಸುಮಾರು 10ರಿಂದ 15 ಕೋಟಿ ರೂ. ವಂಚಿಸಿರಬಹುದೆಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರಿಯೋ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments