Webdunia - Bharat's app for daily news and videos

Install App

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಚಾರಿ ನಿರೀಕ್ಷರ ಹುದ್ದೆ ಕೊಡಿಸುವುದಾಗಿ ವಂಚನೆ

Webdunia
ಶನಿವಾರ, 16 ಅಕ್ಟೋಬರ್ 2021 (21:48 IST)
ಬೆಂಗಳೂರು: ಸಾರಿಗೆ ನಿಗಮದಲ್ಲಿ ಉದ್ಯೋಗ ಕೊಡಿಸುವುದಾಗಿ ನೂರಾರು ಮಂದಿಯಿಂದ ಕೋಟ್ಯಾಂತರ ರೂ. ವಂಚಿಸಿದ ಇಬ್ಬರನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ. 
ಹಗರಿಬೊಮ್ಮನಹಳ್ಳಿಯ ಮಂಜುನಾಥ್ (45) ಹಾಗೂ ಆತನ ಗೆಳೆಯ ಅನಿಲ್ (41) ಬಂಧಿತ ಆರೋಪಿಗಳು.
ಮಂಜುನಾಥ್ ವಂಚಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದ. ಈತ ವಂಚಿಸಲೆಂದೇ ಪ್ರೀಜಾ ಕಾರೊಂದನ್ನು ಖರೀದಿಸಿ ಅದಕ್ಕೆ ಕರ್ನಾಟಕ ಸರ್ಕಾರ ಎಂಬ ಫಲಕ ಹಾಕಿಕೊಂಡು ರಾಜ್ಯದೆಲ್ಲೆಡೆ ಸುತ್ತುತ್ತಿದ್ದ. ಈ ವೇಳೆ ಕಲುಬುರಗಿ, ರಾಯಚೂರು, ಬಳ್ಳಾರಿ, ಗದಗ್ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ನಿರುದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಅವರಿಗೆ ಕೆಎಸ್‍ಆರ್ ಟಿಸಿ ಟ್ರಾಫಿಕ್ ಇನ್ ಸ್ಪೆಕ್ಟರ್ ಉದ್ಯೋಗ ಕೊಡಿಸುವುದಾಗಿ ನಂಬಿಸುತ್ತಿದ್ದ. ಬಳಿಕ ಅವರಿಂದ ಹಣ ವಸೂಲಿ ಮಾಡಿಕೊಂಡು ನಾಪತ್ತೆಯಾಗುತ್ತಿದ್ದ. ಇದುವರೆಗೂ ಸುಮಾರು 500 ಮಂದಿಗೆ ಇದೇ ರೀತಿ ವಂಚಿಸಿದ್ದಾನೆ ಎಂದು ತಿಳಿದುಬಂದಿದೆ. 
ಸುಮಾರು 10ರಿಂದ 15 ಕೋಟಿ ರೂ. ವಂಚಿಸಿರಬಹುದೆಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರಿಯೋ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments