Webdunia - Bharat's app for daily news and videos

Install App

ಕೊಲೆ ಆರೋಪಿಗೆ ಗುಂಡೇಟು

Webdunia
ಮಂಗಳವಾರ, 4 ಡಿಸೆಂಬರ್ 2018 (20:12 IST)
ರಾಜಧಾನಿಯಲ್ಲಿ ಮತ್ತೆ ಪೊಲೀಸರ ರಿವಾಲ್ವರ್ ಸದ್ದು ಮಾಡಿದೆ. ಹೆಣ್ಣೂರಿನ ಬಳಿ ಲಾರಿ ಚಾಲಕ ಕೇಶವ್ ಅವರನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿ ಅಭಿಷೇಕ್ಗೆ  ಮಧ್ಯರಾತ್ರಿ ಪೊಲೀಸ್ ಗುಂಡು ಹೊಡೆದು ಬಂಧಿಸಿದ್ದಾರೆ.

ಹೆಣ್ಣೂರು ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಡಿ.ಕುಲಕರ್ಣಿ ಹಾರಿಸಿದ ಗುಂಡು ತಗುಲಿ ಬಲಗಾಲಿಗೆ ಗಾಯಗೊಂಡಿರುವ ವಡ್ಡರಪಾಳ್ಯದ ಅಭಿಷೇಕ್(19)ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಬಂಧಿಸಲು ಹೋದಾಗ ಅಭಿಷೇಕ್ ಚಾಕುವಿನಿಂದ ಇರಿದಿದ್ದರಿಂದ ಗಾಯಗೊಂಡಿರುವ ಹೆಣ್ಣೂರು ಠಾಣೆಯ ಪೇದೆ ಸಂತೋಷ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಳೆದ , 30ರಂದು ರಾತ್ರಿ ಲಾರಿ ಚಾಲಕ ಕೇಶವ್ನನ್ನು ಇತರ ನಾಲ್ವರ ಜೊತೆ ಸೇರಿ ಕೊಲೆ ಮಾಡಿದ್ದ ಅಭಿಷೇಕ್ ರಾತ್ರಿ 1.45ರ ವೇಳೆ ಮನೆಗೆ ಬಟ್ಟೆ ಬದಲಿಸಲು ಬರುತ್ತಿರುವ ಖಚಿತ ಮಾಹಿತಿ ಆಧರಿಸಿ ಹೆಣ್ಣೂರು ಬಂಡೆ ಬಳಿ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಡಿ.ಕುಲಕರ್ಣಿ ಮತ್ತವರ ತಂಡ ಕಾದು ಕುಳಿತಿತ್ತು.

ಅಭಿಷೇಕ್ ಬರುತ್ತಿರುವುದನ್ನು ಕಂಡ ಪೊಲೀಸ್ ಸಿಬ್ಬಂದಿ ಸಂತೋಷ್ ಬೆನ್ನಟ್ಟಿ ಆತನನ್ನು ಹಿಡಿಯಲು ಹೋದಾಗ ಚಾಕುವಿನಿಂದ ಹಲ್ಲೆ ನಡೆಸಿ ತಪ್ಪಿಸಿಕೊಂಡು ಓಡಿದ್ದಾನೆ. ಕೂಡಲೇ ಕುಲಕರ್ಣಿ ಅವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಬೆನ್ನಟ್ಟಿ ಹೇಳಿದರೂ ಮತ್ತೆ ಚಾಕು ಹಿಡಿದು ನುಗ್ಗಿದ್ದರಿಂದ ಆತ್ಮರಕ್ಷಣೆಗಾಗಿ ಮತ್ತೊಂದು ಗುಂಡು ಹಾರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

ಮುಂದಿನ ಸುದ್ದಿ
Show comments