Webdunia - Bharat's app for daily news and videos

Install App

ಜಿ.ಪರಮೇಶ್ವರ್, ಸಿಎಂ ವಿರುದ್ಧವೇ ಕಾಂಗ್ರೆಸ್ಸಿಗರಿಂದ ದೂರುಗಳ ಸುರಿಮಳೆ

Webdunia
ಸೋಮವಾರ, 8 ಮೇ 2017 (16:04 IST)
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಬೇಡ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಪ್ರಚಾರ ಕೈಗೊಳ್ಳಲಿ ಎಂದು ಕೆಲ ಕಾಂಗ್ರೆಸ್ ಮುಖಂಡರು ಸಲಹೆ ನೀಡಿದ್ದಾರೆ.
 
ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ ವೇಣುಗೋಪಾಲ್ ಮುಂದೆ ಕಾಂಗ್ರೆಸ್ ಮುಖಂಡರು  ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುಗಳ ಸುರಿಮಳೆಗೈದರು.
 
ಕಾಂಗ್ರೆಸ್ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುಗಳು ನೀಡಿರುವುದು ಕಂಡ ವೇಣುಗೋಪಾಲ್ ಶಾಕ್‌ಗೊಳಗಾದರು.
 
ಅಭಿಪ್ರಾಯ ಸಂಗ್ರಹದ ವೇಳೆ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರಿಗೆ ಮಾತ್ರ ಮಣೆಹಾಕುತ್ತಿದ್ದಾರೆ. ನಿಗಮ ಮಂಡಳಿ ನೇಮಕಕ್ಕೆ ಅನಗತ್ಯ ವಿಳಂಬ ಮಾಡಿದರು. ಪರಮೇಶ್ವರ್ ಸಂಪುಟದಲ್ಲಿರುವುದರಿಂದ ತುಟಿ ಬಿಚ್ಚುತ್ತಿಲ್ಲ. ಪಕ್ಷ ಸಂಘಟನೆಗೆ ಸಿಎಂ ಸಾಥ್ ನೀಡಿಲ್ಲ ಎಂದು ಆರೋಪಿಸಿದರು.
 
ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲಿಲ್ಲ. ಕೆಪಿಸಿಸಿ ಅಧ್ಯಕ್ಷರನ್ನು ಕೂಡಲೇ ಬದಲಾವಣೆ ಮಾಡಬೇಕು. ಅವರಿಗೆ  
ಎರಡು ಸ್ಥಾನಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಕೆಪಿಸಿಸಿ ಸದಸ್ಯರು ಒತ್ತಾಯಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments