Webdunia - Bharat's app for daily news and videos

Install App

ಅಕ್ರಮ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಬೆಲೆಯ ಜಮೀನು ಗುಳುಂ

Webdunia
ಭಾನುವಾರ, 16 ಜೂನ್ 2019 (19:05 IST)
ಕೋಟ್ಯಾಂತರ ಬೆಲೆ ಬಾಳುವ ಜಮೀನು ಗುಳುಂ ಮಾಡಿರುವ ಪ್ರಕರಣ ನಡೆದಿದೆ. ಅಕ್ರಮ ದಾಖಲೆಗಳ ಸೃಷ್ಟಿಸಿ ಜಮೀನು ಲಪಟಾಯಿಸಿರುವ ಆರೋಪ ಕೇಳಿಬಂದಿದೆ.

ಜಮೀನು ಕಳೆದುಕೊಂಡ ರೈತರು ಪರದಾಟ  ನಡೆಸ್ತಿದ್ದಾರೆ. ಆಂಜಿನಪ್ಪ ಎಂಬುವರಿಂದ ಭೂ ಕಬಳಿಕೆಯಾಗಿರುವ ಆರೋಪ ಕೇಳಿಬಂದಿದೆ.

ಸರ್ವೇ ನಂ. 42 ರಲ್ಲಿ ಭಾರಿ ಗೋಲ್ ಮಾಲ್ ನಡೆದಿದೆ ಎನ್ನಲಾಗಿದೆ. ಶಿಡ್ಲಘಟ್ಟ ತಾಲ್ಲೂಕಿನ ಕಾಳನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ವಿಜಯಪುರ- ಕೋಲಾರ ಮುಖ್ಯರಸ್ತೆಯಲ್ಲಿರುವ ಜಮೀನು ಒಂಭತ್ತು ಜನರಿಗೆ ಸೇರಬೇಕಾದ ಜಮೀನು ಕಂಡೋರ ಪಾಲು ಆಗಿದೆ.
ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದರೂ ಅಧಿಕಾರಿಗಳಿಂದ ರೈತರಿಗೆ ನೋಟೀಸ್ ನೀಡಲಾಗಿದೆ. ಖರಾಬು ಜಮೀನು ಪರಭಾರೆ ಮಾಡಬಾರದೆಂಬ  ಸರ್ಕಾರದ ಆದೇಶ ಉಲ್ಲಂಘನೆ ಮಾಡಲಾಗಿದೆ.

ಕಂದಾಯ ಇಲಾಖಾ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ನ್ಯಾಯ ಕೇಳಲು ಹೋದರೆ ರೈತರಿಗೆ ಬೆದರಿಕೆ ಕರೆ ಮಾಡಲಾಗುತ್ತಿದೆ ಎಂದು ರೈತ ನಾಗರಾಜು ದೂರಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಾಳನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments