Select Your Language

Notifications

webdunia
webdunia
webdunia
webdunia

ಸಿಟ್ಟಿನ ಭರದಲ್ಲಿ ಪತ್ನಿಯನ್ನೇ ಪರಲೋಕಕ್ಕೆ ಕಳಿಸಿದ ಭೂಪ

ಸಿಟ್ಟಿನ ಭರದಲ್ಲಿ ಪತ್ನಿಯನ್ನೇ ಪರಲೋಕಕ್ಕೆ ಕಳಿಸಿದ ಭೂಪ
ಬೀದರ್ , ಶುಕ್ರವಾರ, 12 ಜುಲೈ 2019 (16:14 IST)
ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅಂತಾ ಗಾದೆ ಇದೆ. ಆದರೆ ಈ ಗಂಡ – ಹೆಂಡತಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಘಟನೆಯಲ್ಲಿ ಪತ್ನಿ ಸಾವನ್ನಪ್ಪಿದ್ದಾಳೆ.

ಶಿವಲೀಲಾ ಬಸವರಾಜ ಮಡ್ಡಿ ಇಲ್ಲಾಳ (35) ಕೊಲೆಯಾದ ಮಹಿಳೆಯಾಗಿದ್ದಾರೆ. ಗಂಡ ಹಾಗೂ ಹೆಂಡತಿ ನಡುವೆ ಜಗಳ ನಡೆದಿದೆ. ಆಗ ಸಿಟ್ಟಿನ ಭರದಲ್ಲಿ ಪತಿಯು ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದಾಗಿ ಪತ್ನಿ ಸಾವನ್ನಪ್ಪಿದ್ದಾಳೆ. 

ಬೀದರ್ ಜಿಲ್ಲೆಯ ಬಸವಕಲ್ಯಾಣದ ದೇಗಲೂರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಈ ಕುರಿತು ಬಸವ ಕಲ್ಯಾಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಸಹವಾಸ ಬೇಡವೇ ಬೇಡ ಎಂದ ಯಡಿಯೂರಪ್ಪ