Webdunia - Bharat's app for daily news and videos

Install App

ಪಂಚ ರಾಜ್ಯಗಳ ಫಲಿತಾಂಶದತ್ತ ಮುಖಂಡರ ಚಿತ್ತ

Webdunia
ಮಂಗಳವಾರ, 11 ಡಿಸೆಂಬರ್ 2018 (19:48 IST)
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲ ಅಧಿವೇಶನದ 2ನೇ ದಿನವಾದ ಇಂದು ಸುವರ್ಣ ವಿಧಾನಸೌಧದಲ್ಲಿ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ್ದೇ ಚರ್ಚೆ ಜೋರಾಗಿತ್ತು.

ಪ್ರತಿಯೊಬ್ಬರ ಚಿತ್ತ ಚುನಾವಣಾ ಫಲಿತಾಂಶದತ್ತ ನೆಟ್ಟಿತ್ತು. ಕ್ಷಣಕ್ಷಣಕ್ಕೂ ಚುನಾವಣಾ ಫಲಿತಾಂಶಗಳ ಮಾಹಿತಿಗಳನ್ನು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರುಗಳು ಪಡೆದುಕೊಳ್ಳುತ್ತಿದ್ದದ್ದು ಕಂಡು ಬಂತು.

ವಿಧಾನಸಭೆಯ ಮೊಗಸಾಲೆಯಲ್ಲೂ ಮೂರು ಪಕ್ಷಗಳ ಶಾಸಕರುಗಳು ಗುಂಪು ಗುಂಪಾಗಿ ಕುಳಿತು ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆಯಲ್ಲಿ ತೊಡಗಿ, ಫಲಿತಾಂಶಗಳನ್ನು ತಮ್ಮದೇ ಆದ ದಾಟಿಯಲ್ಲಿ ವಿಶ್ಲೇಷಿಸುತ್ತಿದ್ದದ್ದು ಸಾಮಾನ್ಯವಾಗಿತ್ತು.
ಮುಂದಿನ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಪರಿಗಣಿತವಾಗಿದ್ದ ಪಂಚರಾಜ್ಯ ಚುನಾವಣೆಯಲ್ಲಿ ಆಡಳಿತರೂಢಾ ಬಿಜೆಪಿ ಮತ್ತೆ ಅಧಿಕಾರ ಹಿಡಿಯಲು ವಿಫಲವಾಗಿರುವುದು ಚರ್ಚೆಗೆ ಗ್ರಾಸವಾಗಿತ್ತು.

ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ತನ್ನ ಬಲವನ್ನು ವೃದ್ಧಿಸಿಕೊಂಡಿರುವ ಬಗ್ಗೆಯೂ ಶಾಸಕರುಗಳು ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments