Select Your Language

Notifications

webdunia
webdunia
webdunia
webdunia

ಅಡಿಕೆ ಆಮದಿಗೆ ಮುಂದಾದ ಕೇಂದ್ರ

ಅಡಿಕೆ ಆಮದಿಗೆ ಮುಂದಾದ ಕೇಂದ್ರ
ನವದೆಹಲಿ , ಸೋಮವಾರ, 17 ಅಕ್ಟೋಬರ್ 2022 (09:13 IST)
ಶಿವಮೊಗ್ಗ : ಭೂತಾನ್ ದೇಶದಿಂದ ಅಡಿಕೆ ಆಮದು ಮಾಡಿಕೊಳ್ಳದಂತೆ ಆಗ್ರಹಿಸಿ, ಎಲೆ ಚುಕ್ಕೆ ರೋಗ ಬಾಧಿತ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಶಿವಮೊಗ್ಗದಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ನಗರದ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕೇಂದ್ರ ಸರ್ಕಾರ ಭೂತಾನ್ ದೇಶದಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. ಇದಕ್ಕೆ ಆಮದು ಸುಂಕ ವಿನಾಯ್ತಿ ನೀಡಲಾಗಿದೆ.

ಈ ಅಡಿಕೆ ನಮ್ಮ ದೇಶಕ್ಕೆ ಬರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಅಡಿಕೆ ಕಾರ್ಯಪಡೆ ಅಧ್ಯಕ್ಷ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊಳೆತ ಶವ ಪತ್ತೆ!