Webdunia - Bharat's app for daily news and videos

Install App

ಪುರಾಣ ಪ್ರಸಿದ್ಧ ಹೇಮಗಿರಿ ಜಾತ್ರೆ ಸಂಭ್ರಮ

Webdunia
ಸೋಮವಾರ, 4 ಫೆಬ್ರವರಿ 2019 (17:36 IST)
ಪುರಾಣ ಪ್ರಸಿದ್ಧ ಹೇಮಗಿರಿ ಜಾತ್ರೆಯಲ್ಲಿ ರಾಸುಗಳ ಕಲರವ ಎಂದಿಗಿಂತ ಈ ಬಾರಿ ಜೋರಾಗಿದೆ.

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ಜಾತ್ರೆಯಲ್ಲಿ ರಾಸುಗಳ ಕಲರವ ಜೋರಾಗಿದೆ. ನಾಡಿನ ವಿವಿಧ ಭಾಗಗಳಿಂದ ಆಗಮಿಸಿರುವ ಲಕ್ಷಾಂತರ ರಾಸುಗಳು ತಮ್ಮ ಮಾಲೀಕರೊಂದಿಗೆ ಜಾತ್ರೆಯಲ್ಲಿವೆ. ‌‌ಭಾರೀ ಪೈಪೋಟಿಯಲ್ಲಿ ರಾಸುಗಳ ಮಾರಾಟವಾಗುತ್ತಿವೆ.

ಬಂಡಿಹೊಳೆ ಗ್ರಾಮದಲ್ಲಿ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ದೇವರ ಉತ್ಸವ ಮೂರ್ತಿಗೆ ಶಾಸಕ ಡಾ.ನಾರಾಯಣಗೌಡ ಮತ್ತು ಮುಜರಾಯಿ ಅಧಿಕಾರಿಗಳಾದ ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಂದ ವಿಶೇಷ ಪೂಜೆ ಸಲ್ಲಿಕೆಯಾಯಿತು.

ಕಲ್ಯಾಣ ವೆಂಕಟರಮಣಸ್ವಾಮಿ ದೇವರ ಉತ್ಸವ ಮೂರ್ತಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಬಂಡಿಹೊಳೆ ಗ್ರಾಮದಲ್ಲಿ ಮೆರವಣಿಗೆಯನ್ನು ತಹಶೀಲ್ದಾರ್ ಮತ್ತು ಶಾಸಕ ನಾರಾಯಣಗೌಡ ಮಾಡಿದರು. ಐದು ಲಕ್ಷ ರೂ.ಗಳಿಗೂ ಹೆಚ್ಚಿನ ಬೆಲೆಯ ರಾಸುಗಳು ಹೇಮಗಿರಿ ಜಾತ್ರೆಯಲ್ಲಿವೆ.ಜಾತ್ರಾ ಮಾಳಕ್ಕೆ ಶುದ್ಧ ಕುಡಿಯುವ ನೀರು ಮತ್ತು ಬೆಳಕಿನ ಸೌಲಭ್ಯವನ್ನು ತಾಲೂಕು ಆಡಳಿತ ಒದಗಿಸಿದ್ದು, ಫೆಬ್ರವರಿ 12ಕ್ಕೆ ಹೇಮಗಿರಿ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಯವರ ಬ್ರಹ್ಮರಥೋತ್ಸವ ನಡೆಯಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments