ವೀರಶೈವರನ್ನು ತುಳಿಯುವ ಕೆಲಸವಾಗುತ್ತಿದೆ ಎಂದ ಶಾಸಕ

Webdunia
ಸೋಮವಾರ, 1 ಅಕ್ಟೋಬರ್ 2018 (15:37 IST)
ವೀರಶೈವ ಸಮಾಜವನ್ನ ತುಳಿಯುವ ಕೆಲಸ ಎಲ್ಲ ಸರ್ಕಾರಗಳಿಂದ ನಡೆಯುತ್ತಿದೆ. ಹೀಗಂತ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರೋಪ ಮಾಡಿದ್ದಾರೆ.

ರಾಜ್ಯದ ಗಣತಿ ವರದಿ ಪ್ರಕಾರ ರಾಜ್ಯದಲ್ಲಿ ಒಟ್ಟು ವೀರಶೈವ ಲಿಂಗಾಯತ  ಜನಸಂಖ್ಯೆ 83 ಲಕ್ಷ ಇದೆ. ಈ ಹಿಂದೆ ಲಿಂಗಾಯತರು ಎರಡು ಕೋಟಿ ಜನ ಸಂಖ್ಯೆ ಇತ್ತು ಎಂದು ದಾವಣಗೆರೆಯ ಹರಿಹರದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಶಾಮನೂರ ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ‌ ಶಾಮನೂರ ಶಿವಶಂಕರಪ್ಪ ಸರಕಾರಗಳ ವಿರುದ್ಧ ಆರೋಪ ಮಾಡಿದ್ದು, ಈ ಹಿಂದೆ ಸಿರಿಗೆರೆ ಮಠದ ಸ್ವಾಮೀಜಿಗಳು ಚುನಾವಣೆಗಳಲ್ಲಿ 10 ರಿಂದ 15 ಜನರನ್ನ ಗೆಲ್ಲಿಸುತ್ತಿದ್ದರು. ನಂತರ ಸರ್ಕಾರ  ಅವರು ಹೇಳಿದಂತೆ ಕೇಳುವಂತೆ ಮಾಡುತ್ತಿದ್ದರು. ಈಗಿನ ಸ್ವಾಮೀಜಿಗಳು ಸಹ ಇಂತಹ ಕೆಲಸ ಮಾಡಬೇಕಿದೆ. ವೀರಶೈವರಲ್ಲಿ ಪಂಚಮಸಾಲಿ ಜಾತಿ ಜನ 80 ಲಕ್ಷ ಅಂತಾರೆ. ಬಣಜಿಗರು 20 ಲಕ್ಷ ಜನಸಂಖ್ಯೆ ಇದೆ ಎನ್ನಲಾಗುತ್ತಿದೆ. ಆದ್ರೆ ಸರ್ಕಾರಿ ದಾಖಲೆಗಳ  ಪ್ರಕಾರ ವೀರಶೈವ ಎಲ್ಲ ಜಾತಿಗಳು ಸೇರಿ 80 ಲಕ್ಷ ಜನಸಂಖ್ಯೆ ಇದೆ. ವೀರಶೈವ ಜಾಗೃತರಾಗಬೇಕು. ನಾನು ಕಾಂಗ್ರೆಸ್ ನಲ್ಲಿ ಇದ್ದರೂ ಸಹ ಸಮಾಜಕ್ಕೆ ಅನ್ಯಾಯ ಆಗಲು ಬಿಡಲ್ಲ ಎಂದು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments