ತಲೆ ನೋವಾಗಿದ್ದ ಚಿರತೆ ಕಡೆಗೂ ಸೆರೆ

Webdunia
ಶುಕ್ರವಾರ, 4 ನವೆಂಬರ್ 2022 (17:57 IST)
ಬಡಾವಣೆಗೆ ಚಿರತೆ ನುಗ್ಗಿ ಮೂವರ ಮೇಲೆ ಅಟ್ಯಾಕ್ ಮಾಡಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರದ ಕನಕಗಿರಿಯಲ್ಲಿ ನಡೆದಿದೆ. ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಹಾಗೂ ಸೈಕಲ್ ಸವಾರರ ಮೇಲೆ ಹಾಗೂ ಅರಣ್ಯ ಸಿಬ್ಬಂದಿಯ ಮೇಲೂ ಚಿರತೆ ದಾಳಿ ಮಾಡಿದೆ. ಇದರಿಂದ ಕೆ.ಆರ್.ನಗರದ ಪಟ್ಟಣದ ಜನರಲ್ಲಿ ಆತಂಕದ ವಾತಾವರಣ ಮನೆಮಾಡಿತ್ತು. ಮೊನ್ನೆಯಷ್ಟೆ ಮೈಸೂರು ಜಿಲ್ಲೆ ತಿ.ನರಸೀಪುರದಲ್ಲಿ ಚಿರತೆ ದಾಳಿ ಮಾಡಿತ್ತು. ಪರಿಣಾಮ ಚಿರತೆ ದಾಳಿಗೆ ಯುವಕ ಮೃತಪಟ್ಟಿದ್ದ. ಇವತ್ತು ಕೆ.ಆರ್.ನಗರ ಪಟ್ಟಣದ ಜನರ ಮೇಲೆ ದಾಳಿ ಮಾಡಿದ ಹಿನ್ನೆಲೆ, ಗಾಯಾಳುಗಳಿಗೆ ಕೆ.ಆರ್.ನಗರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ ತಲೆನೋವಾಗಿದ್ದ ಚಿರತೆ ಕಡೆಗೂ ಪಟ್ಟಣದ 18 ನೇ ವಾರ್ಡ್‌ನಲ್ಲಿ ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಅರವಳಿಕೆ ಮದ್ದು ನೀಡಿ ಚಿರತೆ ಸೆರೆ‌ಹಿಡಿದಿದ್ದಾರೆ. ಚಿರತೆ ಸೆರೆ ಕಾರ್ಯಾಚರಣೆಯಲ್ಲಿ ಮೈಸೂರು ಮೃಗಾಲಯ ಪಾಲ್ಗೊಂಡಿತ್ತು. ಇದರಿಂದ ಚಿರತೆ ಸೆರೆಯಿಂದ ನಾಗರೀಕರು ನಿಟ್ಟುಸಿರು ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಮುಂದಿನ ಸುದ್ದಿ
Show comments