Webdunia - Bharat's app for daily news and videos

Install App

ಸಾಹಿತ್ಯ ಸಮ್ಮೇಳನ : ನುಡಿ ತೇರಿನ ಪ್ರಚಾರ ರಥ ಹೇಗಿದೆ?

Webdunia
ಗುರುವಾರ, 30 ಜನವರಿ 2020 (21:22 IST)
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕಲಬುರಗಿ ಜಿಲ್ಲೆಯಲ್ಲಿ ಅಕ್ಷರ ಜಾತ್ರೆ ಕುರಿತು ಜನಜಾಗೃತಿ ಮೂಡಿಸಲು ಮತ್ತು ನುಡಿ ಸಮ್ಮೇಳನಕ್ಕೆ ಆಹ್ವಾನಿಸುವ ವಿಶೇಷ ವಿನ್ಯಾಸದ ಪ್ರಚಾರ ರಥಕ್ಕೆ ಚಾಲನೆ ನೀಡಲಾಗಿದೆ.

ಕಲಬುರಗಿಯಲ್ಲಿ ಫೆಬ್ರವರಿ 5 ರಿಂದ 7ರ ವರೆಗೆ ಕಲಬುರಗಿಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಅದರ ಅಂಗವಾಗಿ ಪ್ರಚಾರ ರಥಕ್ಕೆ ವಿಧಾನಸಭೆಯ ಶಾಸಕರಾದ ಖನೀಸ್ ಫಾತಿಮಾ, ಎಂ.ವೈ.ಪಾಟೀಲ ಹಾಗೂ ವಿಧಾನ ಪರಿಷತ್ತಿನ ಶಾಸಕ ತಿಪ್ಪಣಪ್ಪ ಕಮಕನೂರ ಚಾಲನೆ ನೀಡಿದ್ರು.

ಪ್ರಚಾರ ಸಮಿತಿಯಿಂದ ಸಿದ್ದಪಡಿಸಲಾದ ತಾಯಿ ಭುವನೇಶ್ವರಿ ಭಾವಚಿತ್ರ ಒಳಗೊಂಡ ಅನುಭವ ಮಂಟಪದ ಮಾದರಿಯ ಈ ಭವ್ಯ ಪ್ರಚಾರ ರಥವು ನೋಡುಗರ ಗಮನ ಸೆಳೆಯುತ್ತಿದೆ. 

ಈ ಭವ್ಯ ಪ್ರಚಾರ ರಥವು ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕಾ ಕೇಂದ್ರಸ್ಥಾನ, ಪ್ರಮುಖ ಹೋಬಳಿ ಮತ್ತು ಹೆದ್ದಾರಿಗಳಲ್ಲಿ ಸಂಚರಿಸಿ ನುಡಿ ಜಾತ್ರೆಗೆ ಆಹ್ವಾನ ನೀಡಲಿದೆ. ರಥದಲ್ಲಿ ಸಮ್ಮೇಳನದ ಪ್ರಚಾರ ಸಾಮಗ್ರಿಗಳಾದ ಪೋಸ್ಟರ್ ಮತ್ತು ಕರಪತ್ರಗಳಿದ್ದು, ಸಿಬ್ಬಂದಿಗಳು ಇದನ್ನು ಪ್ರತಿ ಊರಿನಲ್ಲಿ ಸಾರ್ವಜನಿಕರಿಗೆ ಹಂಚಲಿದ್ದಾರೆ.

ಇದಲ್ಲದೆ ನುಡಿ ಜಾತ್ರೆಯ ಪ್ರಚಾರದ ಜಿಂಗಲ್ಸ್ ಹಾಡುಗಳು, ಬಾರಿಸು ಕನ್ನಡ ಡಿಂಡಿಮವಾ ಓ ಕರ್ನಾಟಕ ಹೃದಯ ಶಿವ, ನುಡಿ ತೇರ, ಹೀಗೆ ಕನ್ನಡಾಭಿಮಾನ ಹೆಚ್ಚಿಸುವ ಗೀತೆಗಳನ್ನು ರಥವು ಪ್ರಸಾರ ಮಾಡುತ್ತಾ ಕನ್ನಡಿಗರಲ್ಲಿ ನಾಡಿನ ನೆಲ-ಜಲ ಭಾಷೆಯ ಬಗ್ಗೆ ಅಭಿಮಾನ ಮೂಡಿಸಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments