Webdunia - Bharat's app for daily news and videos

Install App

ಮೇಯಲು ಬಿಟ್ಟ ಜಾನುವಾರು ಅಸ್ವಸ್ಥ: ವಿಶಪ್ರಾಶನ ಶಂಕೆ

Webdunia
ಗುರುವಾರ, 12 ಜುಲೈ 2018 (17:30 IST)
ಬೈಂದೂರು ತಾಲೂಕಿನ ಯಳಜಿತ್ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಏಳು ಜಾನುವಾರುಗಳು ದಾರುಣವಾಗಿ ಸಾವನ್ನಪ್ಪಿದ ನೆನಪು ಹಸಿರಾಗಿರುವಾಗಲೇ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮಪಂಚಾಯತ್ ವ್ಯಾಪ್ತಿಲ್ಲಿ ಇನ್ನೆರಡು ಜಾನುವಾರಗಳು ಅಸ್ವಸ್ಥಗೊಂಡಿದ್ದು, ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ಮುಂದುವರಿಸಿದ್ದಾರೆ.

ಕೊರ್ಗಿ ನಿವಾಸಿ ಗುಲಾಬಿ ಬಳೆಗಾರ್ತಿ ಎಂಬವರಿಗೆ ಸೇರಿದ ಒಂದು ಗಬ್ಬದ ದನ ಹಾಗೂ ಒಂದು ಕರು ಅಸ್ವಸ್ಥಗೊಂಡಿದೆ. ಕರುವಿನ ಸ್ಥಿತಿ ಗಂಭೀರವಾಗಿದ್ದು, ದನ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದೆ. ದನ ತೋಟಕ್ಕೆ ಹೋಗುವ ವಿಚಾರದಲ್ಲಿ ನಿನ್ನೆ ಸಂಜೆ ಗುಲಾಬಿ ಬಳೆಗಾರ್ತಿ ಹಾಗೂ ಪಕ್ಕದ ಮನೆಯವರ ನಡುವೆ ಗಲಾಟೆ ನಡೆದಿತ್ತು. ಈ ವೇಳೆಯಲ್ಲಿ ನಾಳೆ ದನಗಳು ನಮ್ಮ ತೋಟಕ್ಕೆ ಬಂದರೆ ಸುಮ್ಮನೆ ಬಿಡುವುದಿಲ್ಲ ಎಂದೂ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ದನಗಳಿಗೆ ವಿಷ ಹಾಕಿ ಸಾಯಿಸುವ ಯತ್ನ ನಡೆಸಿದ್ದಾರೆ ಎಂದು ದೂರಲಾಗಿದೆ. ಈ ಹಿಂದೆಯೂ ಕೂಡ ಒಂದು ದನ ಇದೇ ರೀತಿಯಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಪಶುವೈದ್ಯಾಧಿಕಾರಿಗಳು ಮೊಕ್ಕಂ ಹೂಡಿದ್ದು, ಚಿಕಿತ್ಸೆ ಮುಂದುವರೆಸಿದ್ದಾರೆ.

ಸ್ಥಳಕ್ಕೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಭೇಟಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಗೋ ಸಂರಕ್ಷಣಾ ಪ್ರಕೋಷ್ಠದ ತಾಲೂಕು ಸಂಚಾಲಕ ಅವಿನಾಶ್ ಉಳ್ತೂರು, ಹ್ರಾಮೀಣ ಭಾಗದಲ್ಲಿ ಇಂತಹ ಪ್ರಕರಣಗಳ ಹೆಚ್ಚುತ್ತಿದ್ದು, ಈ ಕುರಿತು ಸಂಬಂಧಪಟ್ಟ ಇಲಾಖೆ ಸೂಕ್ತ ಕ್ಮ ಕೈಗೊಳ್ಳಬೇಕಾಗಿದೆ. ಬೈಂದೂರು ಹಾಗೂ ಕೊರ್ಗಿ ಪ್ರಕರಣದಲ್ಲಿ ಸಮಗ್ರ ತನಿಖೆ‌ ನಡೆಸಿ ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕುಂದಾಪುರ ಡಿವೈಎಸ್ಪಿ ಕಚೇರಿ ಎದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments