Webdunia - Bharat's app for daily news and videos

Install App

ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ!

Webdunia
ಶುಕ್ರವಾರ, 9 ಜೂನ್ 2023 (09:24 IST)
ಬೆಂಗಳೂರು : ಯುವತಿ ಮೇಲೆ ಸ್ನೇಹಿತರಿಂದ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಯುವತಿ ಮೇಲೆ ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ.
 
ಈ ಘಟನೆ ಜೂನ್ 6ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಗಿರಿನಗರ ಪೊಲೀಸರು ಸದ್ಯ ಪುರುಷೋತ್ತಮ್ ಹಾಗು ಚೇತನ್ ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ. ಮೊಬೈಲ್ ಕೊಡುತ್ತೇನೆಂದು ಪುರುಷೋತ್ತಮ್ , ತನ್ನ ಪ್ರೇಯಸಿಯನ್ನು ಪುಸಲಾಯಿಸಿ ರೂಮ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಪುರುಷೋತ್ತಮ್ ಹಾಗೂ ಯುವತಿ ಮೂಲತಃ ಇಬ್ಬರೂ ತುಮಕೂರು ಜಿಲ್ಲೆ ಕೊರಟಗೆರೆ ಮೂಲದವರಾಗಿದ್ದು, ಕಳೆದ 1 ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ವಾರ ಅಷ್ಟೇ ಪುರುಷೋತ್ತಮ್ ಪ್ರೇಯಸಿಯನ್ನು ಭೇಟಿಯಾಗಿ ಮೊಬೈಲ್ ಪಡೆದುಕೊಂಡಿದ್ದ. ಬಳಿಕ 2 ದಿನಗಳ ಹಿಂದೆ ಯುವತಿ ಪುರುಷೋತ್ತಮ್ ಗೆ ಕರೆ ಮಾಡಿ ಮೊಬೈಲ್ ಕೇಳಿದ್ದಳು.

ಸರಿ ಮೆಜೆಸ್ಟಿಕ್ಗೆ ಬಾ ಮೊಬೈಲ್ ಕೊಡುತ್ತೇನೆ ಎಂದಿದ್ದ. ಅದರಂತೆ ಯುವತಿ ಜೂನ್ 6ರಂದು ಬೆಂಗಳೂರಿನ ಮೆಜೆಸ್ಟಿಕ್ಗೆ ಬಂದಿದ್ದಳು. ನಂತರ ಗಿರಿನಗರದ ಈರಣ್ಣಗುಡ್ಡೆಯ ಸ್ನೇಹಿತನ ರೂಮ್ಗೆ ಕರೆದೊಯ್ದಿದ್ದ. ಈ ವೇಳೆ ನನ್ನ ಮೊಬೈಲ್ ಕೊಡು ಊರಿಗೆ ಹೋಗಬೇಕೆಂದು ಯುವತಿ ಹೇಳಿದ್ದಾಳೆ. ಆದ್ರೆ, ಪುರುಷೋತ್ತಮ್ ಮೊಬೈಲ್ ನೀಡದೆ ಸತಾಯಿಸಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ನಂತರ ರೂಮ್ಗೆ ಬಂದಿದ್ದ ಸ್ನೇಹಿತ ಚೇತನ್ ಸಹ ಯುವತಿ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಾನೆ. ಯುವತಿ ಚೀರಾಟ ಕೇಳಿ ಅಕಪಕ್ಕದ ಮನೆಯುವರು ಜಮಾವಣೆಗೊಂಡು ಗಿರಿನಗರ ಠಾಣೆ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ