Webdunia - Bharat's app for daily news and videos

Install App

ಮತ್ತೆ ಭುಗಿಲೆದ್ದ ಅಷ್ಟ ಮಠಗಳ ನಡುವಿನ ಮುಸುಕಿನ ಗುದ್ದಾಟ

Webdunia
ಬುಧವಾರ, 4 ಜುಲೈ 2018 (17:23 IST)
ಅಷ್ಟ ಮಠಗಳ ನಡುವಿನ ಮುಸುಕಿನ ಗುದ್ದಾಟ ಮತ್ತೆ ಭುಗಿಲೆದ್ದಿದೆ. ಶೀರೂರು ಮಠದ ಪಟ್ಟದ ದೇವರನ್ನು ಹಿಂದಿರುಗಿಸಲು ಪರ್ಯಾಯ ಪಲಿಮಾರು ಮಠಾಧೀಶರು ನಿರಾಕರಿಸುವುದರೊಂದಿಗೆ ಶೀರೂರು ಮಠದೊಂದಿಗಿನ ಸಂಘರ್ಷ ತೀವ್ರತೆಯನ್ನು ಪಡೆದುಕೊಂಡಿದೆ.

ಶೀರೂರು ಮಠಕ್ಕೆ ಶಿಷ್ಯ ಸ್ವೀಕಾರ ಮಾಡದೇ ಪಟ್ಟದ ದೇವರನ್ನು ಹಿಂದಿರುಗಿಸುವುದಿಲ್ಲ ಎಂದು ಪಲಿಮಾರು ಶ್ರೀಗಳ ನಿಲುವಿಗೆ ಇತರ ಮಠಾಧೀಶರು ಕೂಡಾ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ ಈ ವಿವಾದ ಮತ್ತಷ್ಟು ಕಗ್ಗಂಟಾಗಿದೆ. ನಿನ್ನೆ ಪೇಜಾರ ಮಠದ ವಿಶ್ವೇಶ ತೀರ್ಥರ ನೇತೃತ್ವದಲ್ಲಿ ನಡೆದ ತುರ್ತು ಸಭೆಯಲ್ಲಿ ಪಟ್ಟದ ದೇವರನ್ನು ಹಿಂದಿರುಗಿಸಬೇಕಾದರೆ ಶಿಷ್ಯ ಸ್ವೀಕಾರ ಮಾಡಿ ಎಂದು ಲಕ್ಷ್ಮೀವರ ತೀರ್ಥರಿಗೆ ತಾಕೀತು ಮಾಡಿದ್ದಾರೆ.

ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥರು ತಮ್ಮ ಆರೊಗ್ಯ ಹದಗೆಟ್ಟ ಹಿನ್ನೆಯಲ್ಲಿ ದೈಹಿಕ ಪೂಜಾ ಕೈಂಕರ್ಯ ನೆಸವೇರಿಸಲು ಪಟ್ಟದ ದೇವರನ್ನು ಅದಮಾರು ಮಠದ ಕಿರಿಯ ಸ್ವಾಮೀಜಿ ಈಶಪ್ರಿಯ ತೀರ್ಥರ ಸುಪರ್ಧಿಗೆ ವಹಿಸಿದ್ದರು. ಈಗ ಆರೋಗ್ಯ ಸುದಾರಿಸಿದ ಬಳಿಕ ಪಟ್ಟದ ದೇವರನ್ನು ಮರಳಿಸಲು ಲಕ್ಷ್ಮಿವರ ತೀರ್ಥರು  ಕೇಳಿದ್ದೇ  ವಿವಾದಕ್ಕೆ ನಾಂದಿಮಾಡಿದಂತಾಗಿದೆ. ಈ ಬೆಳವಣಿಗೆಗಳ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪಲಿಮಾರು ಪರ್ಯಾಯ ಸ್ವಾಮಿಜಿಗಳು, ಈ ವಿವಾದದ ಕುರಿತಂತೆ ಶೀಘ್ರವೇ ಇತರ ಮಠಾಧೀಶರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರಲಾಗುವುದು ಎಂದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments