Webdunia - Bharat's app for daily news and videos

Install App

ಮೈತ್ರಿಯಿಂದ ರಾಜಕೀಯದಲ್ಲಿ ಸಿದ್ಧಾಂತ ಮುಖ್ಯವಲ್ಲ ಎಂಬ ಸಂದೇಶ:ಡಿಸಿಎಂ ಡಿ.ಕೆ.ಶಿವಕುಮಾರ್

Webdunia
ಬುಧವಾರ, 27 ಸೆಪ್ಟಂಬರ್ 2023 (16:00 IST)
ರಾಜಕಾರಣದಲ್ಲಿ ಸಿದ್ದಾಂತ ಮುಖ್ಯವಲ್ಲ ಎನ್ನುವ ಕೆಟ್ಟ ಸಂದೇಶವನ್ನು ಜೆಡಿಎಸ್- ಬಿಜೆಪಿ ಮೈತ್ರಿ ನೀಡಿದೆ “ಜೆಡಿಎಸ್- ಬಿಜೆಪಿ ಮೈತ್ರಿ ನಂತರ ಪಕ್ಷ ಸೇರುವಂತಹವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
 
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜೆಡಿಎಸ್ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಮಂಗಳವಾರ ರಾತ್ರಿ ಮೂರು ಜನ ಮಾಜಿ ಶಾಸಕರ ಜೊತೆ ಮಾತುಕತೆ ನಡೆಸಿದ್ದೇನೆ, ಮುಂದಿನ ದಿನಗಳಲ್ಲಿ ಪಕ್ಷ ಸೇರುವವರ ಸಂಖ್ಯೆ ಹೆಚ್ಚಾಗಲಿದೆ. ನಾವೆಲ್ಲಾ ಜಾತ್ಯಾತೀತ ಸರ್ಕಾರ ಇರಬೇಕು ಎಂದು ಹೋರಾಟ ಮಾಡಿದೆವು. ಈಗ ಸರ್ಕಾರ ಬೀಳಿಸಿದವರ ಜೊತೆಯಲ್ಲೇ ಕೈ ಜೋಡಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
 
ಮೈತ್ರಿಯನ್ನು ವಿರೋಧಿಸಿ ಪಕ್ಷ ತೊರೆದು ಬರುತ್ತಿದ್ದಾರೆ. ನಮಗೆ ಮುಖಂಡರಿಗಿಂತ ಕಾರ್ಯಕರ್ತರು ಬಹಳ ಮುಖ್ಯ, ಶಿವಮೊಗ್ಗ, ರಾಮನಗರ, ಬೆಂಗಳೂರು ನಗರ ಹೀಗೆ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ತಂಡೋಪತಂಡವಾಗಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಮರ್ಥ್ಯವಿರುವ ಅಭ್ಯರ್ಥಿಗಳೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದರು.
 
ಆಪರೇಷನ್ ಹಸ್ತ ನಾವೆಂದೂ ಮಾಡುವುದಿಲ್ಲ, ನಮ್ಮದು ಕೋ- ಆಪರೇಷನ್ ಎಂದು ಪದೇ, ಪದೇ ಹೇಳುತ್ತಿದ್ದೇನೆ. ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಿದ್ದೇನೆ ಎಂದರು.
 
ಮಾಜಿ ಆಶ್ರಯ ಸಮಿತಿಯ ಅಧ್ಯಕ್ಷ ಕೆ.ಎಂ.ಹೋಂಬೇಗೌಡ, ಎಪಿಎಂಸಿ ಸದಸ್ಯರಾದ ಟಿ.ಎ.ಮೂರ್ತಿ, ನಿವೃತ್ತ ಪಶುವೈದ್ಯಧಿಕಾರಿ ಡಾ.ರಾಜು, ಸಿಲ್ಕ್ ಮಂದಿರ್ ಮಾಲೀಕರಾದ ತಿಮ್ಮೇಗೌಡ ಅವರು ಸೇರಿದಂತೆ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾವರೆಕೆರೆ, ಸೂಲಿವಾರ, ಬ್ಯಾಲಾಳು, ದೊಣ್ಣೇನಹಳ್ಳಿ,  ಕುರುಬರಪಾಳ್ಯ,  ಉದ್ದಂಡಹಳ್ಳಿ, ಗೊಲ್ಲಹಳ್ಳಿ ಗ್ರಾಮಗಳ 70ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಸೇರ್ಪಡೆಯಾದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments