Select Your Language

Notifications

webdunia
webdunia
webdunia
webdunia

ಚುನಾವಣೆಯ ವೇಳೆ ಸೇನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ- ಕಾಂಗ್ರೆಸ್ ಸಂಸದನ ವಿವಾದಾತ್ಮಕ ಹೇಳಿಕೆ

ಚುನಾವಣೆಯ ವೇಳೆ ಸೇನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ- ಕಾಂಗ್ರೆಸ್ ಸಂಸದನ ವಿವಾದಾತ್ಮಕ ಹೇಳಿಕೆ
ಯಾದಗಿರಿ , ಬುಧವಾರ, 27 ಫೆಬ್ರವರಿ 2019 (16:32 IST)
ಯಾದಗಿರಿ : ಭಾರತೀಯ ಸೇನೆಯ ಏರ್ ಸರ್ಜಿಕಲ್ ಸ್ಟ್ರೈಕ್ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣೆಯ ಈ ಸಂದರ್ಭದಲ್ಲಿ ಸೇನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ರಾಯಚೂರು ಸಂಸದ ಬಿ.ವಿ. ನಾಯಕ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.


ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಳ್ಳಲು ಯಾದಗಿರಿಗೆ ಆಗಮಿಸಿದ ಕಾಂಗ್ರೆಸ್ ಸಂಸದ ಬಿ.ವಿ. ನಾಯಕ್,  ‘ಸರ್ಜಿಕಲ್ ಸ್ಟ್ರೈಕ್ ಹೊಸದಲ್ಲ.  ದೇಶದ ಆಂತರಿಕ ರಕ್ಷಣೆ ಸಂದರ್ಭದಲ್ಲಿ ಇಂತಹ ಪ್ರಕ್ರಿಯೆಗಳು ಸಹಜ. ಈ ಹಿಂದೆಯೂ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗಲೂ ಇಂತಹ ದಾಳಿ ನಡೆಸಿತ್ತು, ಆದರೆ ಪ್ರಚಾರ ಮಾಡಲಿಲ್ಲ ಎಂದು ಹೇಳಿದ್ದಾರೆ.


ಆದರೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕೋಸ್ಕರ ದಾಳಿಯ ಪ್ರಚಾರ ಪಡೆಯುತ್ತಿದೆ. ಚುನಾವಣೆಯ ಈ ಸಂದರ್ಭದಲ್ಲಿ ಸೇನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹೂವಿಗೆ ಬೆಂಕಿ ಬಿದ್ದು ಆದ ನಷ್ಟ ಎಷ್ಟು ಗೊತ್ತಾ?