Webdunia - Bharat's app for daily news and videos

Install App

ಶಿಕ್ಷಣ ವ್ಯಾಪಾರೀಕರಣ ಆಗ್ತಿದೆ ಎಂದ ಶಿಕ್ಷಣ ಸಚಿವ

Webdunia
ಬುಧವಾರ, 26 ಜೂನ್ 2019 (16:18 IST)
ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಎನ್ನೋದು ವ್ಯಾಪಾರೀಕರಣ ಆಗ್ತಿದೆ. ಹೀಗಂತ ಶಿಕ್ಷಣ ಸಚಿವರೇ ಒಪ್ಪಿಕೊಂಡಿದ್ದಾರೆ.

ಶಿಕ್ಷಣ ಸಚಿವ ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸಮಸ್ಯೆಗಳಿವೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜೊತೆ ಈಗಾಗಲೇ ಸಭೆ ಮಾಡಿದ್ದೇವೆ. ಆ ಶಾಲೆಗಳನ್ನ ಮೇಲ್ದರ್ಜೆಗೇರಿಸಲು ಚಿಂತನೆ ನಡೆದಿದೆ.

ಆಮೂಲಾಗ್ರ ಬದಲಾವಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದರು. ಶೌಚಾಲಯ, ಕಟ್ಟಡಗಳ ನಿರ್ಮಾಣ, ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ಅನುದಾನವನ್ನ ನೋಡಿಕೊಂಡು ಅಭಿವೃದ್ಧಿಪಡಿಸಲಾಗುವುದು.

1200 ಕೋಟಿ ರೂ.‌ ಅನುದಾನವನ್ನ ನಮಗೆ ನೀಡಲಾಗಿದೆ. ಕೇರಳ, ದೆಹಲಿಯಲ್ಲಿ ಶಿಕ್ಷಣದ ಅಭಿವೃದ್ಧಿ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಸರ್ಕಾರದಿಂದ ಉತ್ತಮ ರೀತಿ ಶಿಕ್ಷಣಕ್ಕೆ ಬೇಕಾದ ಕ್ರಮ ಕೈಗೊಳ್ಳಲಾಗುವುದು ಎಂದರು.

ಕನ್ನಡ ಮಾದ್ಯಮ ಶಾಲೆಗಳು ಉತ್ತಮ‌ ಸ್ಥಿತಿಯಲ್ಲಿವೆ. ಆದ್ರೆ ಪ್ರತಿವರ್ಷ 20ರಿಂದ30 ಶಾಲೆಗಳು ಮುಚ್ಚುತ್ತಿವೆ.

ಶಿಕ್ಷಣ ವ್ಯಾಪಾರಿಕರಣ ಆಗ್ತಿರೋದು ಇದಕ್ಕೆ ಕಾರಣ. ಖಾಸಗಿ ಶಿಕ್ಷಣ ಸಂಸ್ಥೆಗಳು ಹಳ್ಳಿಗಳಿಗೂ ವ್ಯಾನ್ ಕಳಿಸಿ ಮಕ್ಕಳನ್ನ ಕರೆತರುತ್ತಿವೆ. ಇದೆಲ್ಲವನ್ನ ಗಮನಿಸಿ ಕನ್ನಡ ಶಾಲೆಗಳ ಅಭಿವೃದ್ಧಿ ಅಗತ್ಯವಿದೆ ಅಂತ ಸಚಿವ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments