Webdunia - Bharat's app for daily news and videos

Install App

ಪಾರ್ಶ್ವವಾಯು ಪೀಡಿತ ಬಿಇಒ ಮನೆಗೆ ಭೇಟಿ ನೀಡಿದ ಶಿಕ್ಷಣ ಸಚಿವ

Webdunia
ಗುರುವಾರ, 10 ಸೆಪ್ಟಂಬರ್ 2020 (23:50 IST)
ಅನಾರೋಗ್ಯ ಪೀಡಿತ ಕೆಇಎಸ್ ಅಧಿಕಾರಿ, ಹಿರಿಯ ಉಪನ್ಯಾಸಕರ ಮನೆಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ ನೀಡಿದ್ದಾರೆ.

ಕಳೆದ ಐದು ವರ್ಷಗಳ ಹಿಂದೆ ಪಾರ್ಶ್ವವಾಯು ಪೀಡಿತರಾಗಿ ಶೇ.100 ರಷ್ಟು ಅಂಗವೈಕಲ್ಯದಿಂದ ಹಾಸಿಗೆ ಹಿಡಿದಿರುವ ಕೆಇಎಸ್ ಅಧಿಕಾರಿ, ಬೆಳಗಾವಿ ಡಯಟ್ ಹಿರಿಯ ಉಪನ್ಯಾಸಕ ಮಹದೇವ ಬ.ಮಾಳಗಿ ಅವರ ನಿವಾಸಕ್ಕೆ ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್.ಸುರೇಶಕುಮಾರ್ ಅವರು ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.

ಇದೇ ವೇಳೆ ಅಧಿಕಾರಿಯ ಸ್ವಯಂ ನಿವೃತ್ತಿ ಆದೇಶವನ್ನು ಹಸ್ತಾಂತರಿಸಿದರು.

1999 ಬ್ಯಾಚಿನ ಕೆಇಎಸ್ ಅಧಿಕಾರಿಯಾಗಿರುವ ಮಹದೇವ ಮಾಳಗಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾಗಿ, ಕ್ಷೇತ್ರ ಶಿಕ್ಷಣಾಧಿಕಾರಿ, ಡಯಟ್ ಹಿರಿಯ ಉಪನ್ಯಾಸಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ‌‌. 2015 ರಿಂದ ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿರುವುದರಿಂದ , ಅವರ ದೈಹಿಕ ಸಾಮರ್ಥ್ಯ ಇಲ್ಲದಿರುವದನ್ನು ಪರಿಗಣಿಸಿ ಸರ್ಕಾರ ಸ್ವಯಂ ನಿವೃತ್ತಿ ಆದೇಶ ನೀಡಿದೆ.

ಕುಟುಂಬದ ಸದಸ್ಯರು ಅನುಕಂಪ ಆಧಾರಿತ ನೌಕರಿಗೆ ಮನವಿ ಮಾಡಿದ್ದಾರೆ, ಇದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಬೇಕಾದ ವಿಷಯವಾಗಿರುವದರಿಂದ ಮುಂಬರುವ ದಿನಗಳಲ್ಲಿ ವಿಷಯವನ್ನು ಸಭೆಗೆ ಮಂಡಿಸಲು ತಮ್ಮ ಶಕ್ತಿಮೀರಿದ ಪ್ರಯತ್ನ ಮಾಡುತ್ತೇನೆ ಎಂದ ಸಚಿವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments