Webdunia - Bharat's app for daily news and videos

Install App

ಪಾಕ್ ಜತೆ ಯುದ್ಧ ನಡೆಯೋದು ಬೇಡವೇ ಬೇಡ ಎಂದ ಸಚಿವ

Webdunia
ಗುರುವಾರ, 28 ಫೆಬ್ರವರಿ 2019 (17:53 IST)
ಭಾರತ ಹಾಗೂ ಪಾಕ್ ಗಡಿಯಲ್ಲಿ ಯುದ್ಧದ ಸನ್ನಿವೇಶ ನಿರ್ಮಾಣವಾಗಿದೆ. ಆದರೆ ಯುದ್ಧ ನಡೆಯೋದು ಬೇಡ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಪಾಕಿಸ್ತಾನ ಹಾಗೂ ಭಾರತದ ನಡುವೆ ಯುದ್ಧ ನಡೆಯೋದು ಬೇಡ ಅಂತ ತೋಟಗಾರಿಕಾ ಸಚಿವ ಎಂ. ಸಿ. ಮನಗೂಳಿ ಹೇಳಿಕೆ ನೀಡಿದ್ದಾರೆ.

ನಿನ್ನೆಯಷ್ಟೇ ಉಗ್ರರ ಮೇಲೆ ದಾಳಿ ಮಾಡಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮನಗೂಳಿ ಈಗ ಪಾಕ್ ಜೊತೆಗೆ ಯುದ್ಧ ಬೇಡವೆಂದು ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

ಯುದ್ಧ ನಡೆದರೇ ಅನಾಹುತವಾಗುತ್ತೆ. ಪಾಕ್ ಜೊತೆಗಿನ ಯುದ್ಧದಿಂದ ದೇಶಕ್ಕೆ ಅನಾಹುತ ಆಗಲಿದೆ ಎಂದೂ ಹೇಳಿಕೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ಬಗ್ಗೆಯೂ ಸಮರ್ಥನೆ ಮಾಡಿಕೊಂಡ ಮನಗೂಳಿ, ಕಾರ್ ನಲ್ಲಿ ಕುಳಿತಾಗ ಮಾಧ್ಯಮದವರು ಕೇಳಿದ ಪ್ರಶ್ನೆ ಏನು ಅಂತ ಗೊತ್ತಾಗಲಿಲ್ಲ. ನಾನು ಏನು ಹೇಳಿದೆ ಅನ್ನೋದು ಅವರಿಗೆ ತಿಳಿಯಲಿಲ್ಲ.
ನನ್ನ ಹೇಳಿಕೆ ತಿರುಚಲಾಗಿದೆ ಎಂದಿದ್ದಾರೆ.

ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ‌ ಮಾಡಿದ್ದು ಸರಿಯಲ್ಲ ಎಂದು ಬಾಗಲಕೋಟೆಯಲ್ಲಿ ಹೇಳಿದ್ದರು ಸಚಿವ ಮನಗೂಳಿ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments