Webdunia - Bharat's app for daily news and videos

Install App

ಕೊರೊನಾ ಬೇರೆ ರೋಗಗಳಂತೆ ಪ್ರಾಣಹರಣ ಮಾಡಲ್ಲ ಎಂದ ಸಚಿವ

Webdunia
ಶನಿವಾರ, 13 ಜೂನ್ 2020 (20:29 IST)
ಸ್ವಾಭಾವಿಕವಾಗಿ ಬರುವ ಕೆಮ್ಮು, ನೆಗಡಿ, ಜ್ವರಕ್ಕೆ ವೈದ್ಯರ ಬಳಿಗೆ ತೆರಳಲು ಹೆದರುವ ಸ್ಥಿತಿ ಕೊರೋನಾದಿಂದ ನಿರ್ಮಾಣವಾಗಿದ್ದು, ಇದು ಹೋಗಬೇಕು.

ಕೊರೊನಾ ಶೀಘ್ರವಾಗಿ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಸಾರ್ಸ್, ಎಬೊಲಾ, ನಿಫಾದಂತೆ ಪ್ರಾಣ ಹರಣ ಮಾಡುವ ಭಯಾನಕ ರೋಗವಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟಾರೆ 6516 ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಅವರಲ್ಲಿ 3440 ರೋಗಿಗಳು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಕರ್ನಾಟಕದಲ್ಲಿ ನೋವೆಲ್ ಕೊರೋನಾ ಸೋಂಕಿನ ಚೇತರಿಕೆ ಪ್ರಮಾಣ ಶೇ. 52.8 ರಷ್ಟು ಹೆಚ್ಚಾಗಿದೆ.

ರಾಜ್ಯದಲ್ಲಿ ಇದುವರೆಗೂ ಕೋವಿಡ್-19 ನಿಂದಾಗಿ 79 ಸಾವುಗಳು ಸಂಭವಿಸಿವೆ. ಮರಣ ಪ್ರಮಾಣ ಶೇಕಡವಾರು 1.2 ರಷ್ಟು ದಾಖಲಾಗಿದೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಶೇ.52.8 ಆದರೆ, ರಾಷ್ಟ್ರಮಟ್ಟದಲ್ಲಿ 49.8 ರಷ್ಟು ದಾಖಲಾಗಿದೆ.

ಈ ಮೂಲಕ ಕೋವಿಡ್-19 ಸೋಂಕಿನ ವಿರುದ್ಧ ರಾಜ್ಯ ಸರ್ಕಾರ ಉತ್ತಮ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ಸಕ್ರಿಯವಿರುವ 2995 ಪ್ರಕರಣಗಳ ಪೈಕಿ 2531 ರೋಗಿಗಳಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ, ಆದಕಾರಣ ಸಾರ್ವಜನಿಕರು ಕೋವಿಡ್-19ಗೆ ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments