Webdunia - Bharat's app for daily news and videos

Install App

ಮಹದಾಯಿ ಕಾಮಗಾರಿ ವಿಳಂಬ ಮಾಡೋದಿಲ್ಲ ಎಂದ ಸಚಿವ

Webdunia
ಬುಧವಾರ, 26 ಸೆಪ್ಟಂಬರ್ 2018 (16:17 IST)
ಈ ರಾಜ್ಯದ ಜನರ ಜನತೆಯ ಬೇಡಿಕೆಯಂತೆ ಸಿಕ್ಕಿರುವ ಮಹದಾಯಿ ನೀರು ಬಳಸಿಕೊಳ್ಳಲು ಸಿದ್ಧರಾಗಿದ್ದೇವೆ. ಯಾವುದೇ ಕಾರಣಕ್ಕೂ ನಾವು ಮಹದಾಯಿ ಯೋಜನೆ ಕಾಮಗಾರಿ ವಿಳಂಬ ಮಾಡಲ್ಲ. ಹೀಗಂತ ನೀರಾವರಿ ಸಚಿವ ಹೇಳಿದ್ದಾರೆ.

ಬೆಳಗಾಗಿ ಜಿಲ್ಲೆಯ ಕಣಕುಂಬಿ ಪ್ರವಾಸಿ ಮಂದಿರದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದರು.
ಸಚಿವರಿಗೆ ಶಾಸಕಿಯರಾದ ಅಂಜಲಿ ನಿಂಬಾಳ್ಕರ, ಲಕ್ಷ್ಮೀ ಹೆಬ್ಬಾಳಕರ ಮತ್ತು ಅಧಿಕಾರಿಗಳು ಸಾಥ್ ನೀಡಿದರು.
ಮಹದಾಯಿ ಹೋರಾಟಕ್ಕೆ ಸ್ಪಂದಿಸಿದ ಮಾಧ್ಯಮದವರು ಮತ್ತು ಎಲ್ಲಾ ಹೋರಾಟಗಾರರಿಗೆ ಅಭಿನಂದನೆ ಸಲ್ಲಿಸಿದ ಡಿಕೆಶಿ, ಮಹದಾಯಿ ತೀರ್ಪಿನಿಂದ ನಮಗೆ ಅನ್ಯಾಯವಾಗಿದೆ. ತೀರ್ಪಿನ ಬಗ್ಗೆ ಸಂತೋಷಪಟ್ಟು ಹೇಳಲು ನಾನು ಸರ್ಕಾರದ ಪರ ಸಿದ್ದನಾಗಿಲ್ಲ. ಮಹದಾಯಿ ಜಲಾನಯನ ಪ್ರದೇಶದಲ್ಲಿ 188 ಟಿಎಂಸಿ ನೀರು ಇರುವುದು ಸ್ಪಷ್ಟವಾಗಿದೆ.

140 ಕ್ಕೂ ಅಧಿಕ ಟಿಎಂಸಿ ನೀರು ಸಮುದ್ರಪಾಲಾಗಿದೆ. ಇವತ್ತು ನಾನು ಶಾಸಕರು, ಅಧಿಕಾರಿಗಳ ಜೊತೆ ಕಣಕುಂಬಿಗೆ ಭೇಟಿ ನೀಡಿದ್ದೇನೆ. ಅನ್ಯಾಯದ ವಿರುದ್ಧ ಸುಪ್ರೀಂ ಕೋರ್ಟಗೆ ಹೋಗಲು ಸಿದ್ಧ ಎಂದ ಅವರು, ಮಹದಾಯಿ ಕಾಮಗಾರಿ ನಡೆಸಲು ಸುಪ್ರೀಂ ಕೋರ್ಟ ಕೊಟ್ಟಿರುವ ಸ್ಟೇ ತೆರವುಗೊಳಿಸಲು, ಕೇಂದ್ರ ಸರ್ಕಾರ ಗೇಜೆಟ್ ಆಗಬೇಕು.  ಅರಣ್ಯ ಇಲಾಖೆಗೆ ಕೇಂದ್ರ ಸರ್ಕಾರದ ಅನುಮತಿ ಬೇಕು.  ಈ ಮೂರು ಆದ್ರೆ ನಾವು ಆದಷ್ಟು ಬೇಗ ಕೆಲಸ ಆರಂಭಿಸುತ್ತೇವೆ.

731 ಹೆಕ್ಟೇರ್ ಜಮೀನು ಬೇಕಿದೆ. ಕಳಸಾಗೆ 499 ಅರಣ್ಯ ಜಮೀನು, 199 ಖಾಸಗಿ ಜಮೀನು ಸ್ವಾಧೀನಕ್ಕೆ ಕ್ರಮಕೈಗೊಳ್ಳುತ್ತೇವೆ. ಸಮುದ್ರಕ್ಕೆ ಹೋಗದೆ ವೇಸ್ಟ್‌ ಮಾಡದೇ ನೀರು ಬಳಸಿಕೊಳ್ಳುತ್ತೇವೆ ಎಂದರು.  

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments