Select Your Language

Notifications

webdunia
webdunia
webdunia
webdunia

ಹಳೇ ಸಾಲ ತೀರಿಸಿದ್ರೆ ಹೊಸ ಸಾಲ ಸಿಗುತ್ತೆ ಎಂದ ಸಚಿವ

ಹಳೇ ಸಾಲ ತೀರಿಸಿದ್ರೆ ಹೊಸ ಸಾಲ ಸಿಗುತ್ತೆ ಎಂದ ಸಚಿವ
ಹಾವೇರಿ , ಭಾನುವಾರ, 21 ಜೂನ್ 2020 (20:05 IST)
ಹೊಸ ಸಾಲ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹಳೆಯ ಸಾಲ ಪಾವತಿ ಮಾಡಿದವರಿಗೆ ಹೊಸ ಸಾಲ ನೀಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.


ಹೀಗಂತ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ ಹೇಳಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ನೂರಕ್ಕೆ ನೂರರಷ್ಟು ಮೆಗಾ ಡೈರಿ ಸ್ಥಾಪನೆ ಮಾಡಲಾಗುವುದು. ಪ್ರತ್ಯೇಕ ಡಿಸಿಸಿ ಬ್ಯಾಂಕ್ , ಕೆ.ಎಂ.ಎಫ್ ಕುರಿತಂತೆ ಈಗಾಗಲೇ ಹಲವು ಸಭೆಗಳನ್ನು ನಡೆಸಲಾಗಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ ಹೇಳಿದ್ದಾರೆ.

ಧಾರವಾಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಡಿಸಿಸಿ ಬ್ಯಾಂಕ್) ಪ್ರತ್ಯೇಕಿಸಿ ಹಾವೇರಿಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಹಾಗೂ ಹಾಲು ಒಕ್ಕೂಟ ಸ್ಥಾಪಿಸುವ ಕುರಿತಂತೆ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದೆ. ನಬಾರ್ಡ್ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಹಣಕಾಸು ವ್ಯವಸ್ಥೆ, ಜಮೀನಿನ ಲಭ್ಯತೆ ಸೇರಿದಂತೆ ಮೂರ್ನಾಲ್ಕು ಸಲಹೆಗಳನ್ನು ಕೇಳಿದ್ದಾರೆ. ಇದೇ ಜುಲೈ 2 ರಂದು ಮತ್ತೊಂದು ಸಭೆಯನ್ನು ನಡೆಸಲಾಗುವುದು. ಸಭೆಯಲ್ಲಿ ಅಂತಿಮ ನಿರ್ಣಯಕೈಗೊಂಡು ಸಚಿವ ಸಂಪುಟದ ಸಭೆಯ ಮುಂದೆ ತಂದು ಬ್ಯಾಂಕ್ ಸ್ಥಾಪನೆ ಕುರಿತಂತೆ ಅಂತಿಮ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಮದ್ವೆ ಆದರೂ ಲವ್ ಮಾಡಿದ ; ಬ್ರೇಕಪ್ ಮಾಡಿಕೊಂಡ ಹುಡುಗಿಯನ್ನು ಕೊಂದ